6:56 PM Thursday6 - August 2026
ಬ್ರೇಕಿಂಗ್ ನ್ಯೂಸ್
ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ…

ಇತ್ತೀಚಿನ ಸುದ್ದಿ

ಇಬ್ಬರು ಹಿರಿಯ ಕಾಯಕ ಯೋಗಿಗಳಿಗೆ ಕದಿಕೆ ಟ್ರಸ್ಟ್ ನ ಅತ್ಯುನ್ನತ ‘ನೇಕಾರ ರತ್ನ’ ಪ್ರಶಸ್ತಿ

06/08/2024, 20:39

ಮಂಗಳೂರು(reporterkarnataka.com): ಕದಿಕೆ ಟ್ರಸ್ಟ್ , ಕೈಮಗ್ಗ ನೇಕಾರರಿಗೆ ಕೊಡ ಮಾಡುವ,ಪ್ರತಿಷ್ಟಿತ “ನೇಕಾರ ರತ್ನ ” ಪ್ರಶಸ್ತಿಗೆ ಸಂಜೀವ ಶೆಟ್ಟಿಗಾರ್ ಹಾಗೂ ಸೋಮಪ್ಪ ಜತ್ತನ್ನ ಆಯ್ಕೆಯಾಗಿದ್ದಾರೆ.
86 ವರ್ಷದ ಸಂಜೀವ ಶೆಟ್ಟಿಗಾರ್( ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ) ಮತ್ತು 87ರ ಹರೆಯದ ಸೋಮಪ್ಪ ಜತ್ತನ್ನ (ನಿರ್ದೇಶಕರು , ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ) ಅವರು ತಮ್ಮ ಜೀವಮಾನದ ಸಾಧನೆಗಾಗಿ ಪ್ರಶಸ್ತಿ ಪಡೆಯಲಿದ್ದಾರೆ. ಇವರಿಬ್ಬರು ಅವಿಭಜಿತ ದ. ಕ. ಜಿಲ್ಲೆಯ ಅತ್ಯಂತ ಹಿರಿಯ ಸಕ್ರಿಯ ನೇಕಾರರು. ಸಂಜೀವ ಶೆಟ್ಟಿಗಾರ್ ಅವರು ಸುಮಾರು 74 ವರ್ಷಗಳಿಂದ ನಿರಂತರ ನೇಯ್ಗೆ ಮಾಡುತ್ತಿರುವುದು ಒಂದು ದಾಖಲೆ ಆಗಿದೆ. ಸೋಮಪ್ಪ ಜತ್ತನ್ನ ಅವರು ಕಳೆದ 66 ವರುಷಗಳಿಂದ ನೇಕಾರಿಕೆಯ ಕಾಯಕದಲ್ಲಿ ನಿರತರಾಗಿದ್ದಾರೆ.
ಸಂಜೀವ ಶೆಟ್ಟಿಗಾರ್ ಈಗ ಅಳಿದು ಹೋದ ಮುತ್ತು ಬಾರ್ಡರ್ ನೇಯ್ಗೆ ಯನ್ನು 2019 ರವರೆಗೆ ನೇಯುತ್ತಿದ್ದರು . ಈಗಲೂ ತಮ್ಮದೇ ವಿನ್ಯಾಸದ ಸೆರಗಿನಲ್ಲಿ ಬುಟ್ಟಾ ಇರುವ 60 ಕೌಂಟ್ ಸೀರೆಗಳನ್ನು ನೇಯುವುದರ ಜೊತೆಗೆ ಅನೇಕ ನೇಕಾರರಿಗೆ ಹಾಸು ಮತ್ತು ವಿನ್ಯಾಸ ಮಾಡುವ ಕೆಲಸ ಮಾಡುತ್ತಾ ಸಕ್ರಿಯರಾಗಿದ್ದಾರೆ. ನೇಕಾರರ ಸಂಘದ ಕಾರ್ಯ ಚಟುವಟಿಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಣೆ ಮಾಡುತ್ತಿದ್ದಾರೆ.
ಸೋಮಪ್ಪ ಜತ್ತನ್ನ ಅವರು 60 ಕೌಂಟ್ ನ ಸಣ್ಣ ಚೌಕುಳಿ ವಿನ್ಯಾಸದ ಅಪೂರ್ವ ಕಟ್ ಬಾರ್ಡರ್ ಉಡುಪಿ ಸೀರೆಗಳನ್ನು ನೇಯುತ್ತಿದ್ದಾರೆ.
ಈ ಹಿರಿಯ ಕಾಯಕ ಯೋಗಿಗಳು ಪರಿಸರ ಸ್ನೇಹಿ ಉಡುಪಿ ಸೀರೆ ನೇಕಾರಿಕೆಗೆ ನೀಡಿದ ಕೊಡುಗೆಗಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಅಳಿವಿನಂಚಿಗೆ ತಲುಪಿದ್ದ ಉಡುಪಿ ಸೀರೆ ನೇಕಾರಿಕೆ ಈಗ ಕದಿಕೆ ಟ್ರಸ್ಟ್ ನ ಪ್ರಯತ್ನದಿಂದ ಪುನಃಶ್ಚೇತನಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು