2:10 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಐಕಾನ್ ವಿನ್ನರ್ಸ್ ಆಗಿ ಹೊರ ಹೊಮ್ಮಿದ ಕಿಂಗ್ಸ್ ಆಫ್ ಕೂರ್ಗ್

23/12/2021, 09:54

ಮಡಿಕೇರಿ(reporterkarnataka.com):

ಸೋಮವಾರಪೇಟೆಯ ಅಡ್ವೆಂಚರ್ ಡ್ಯಾನ್ಸ್ ಕಂಪೆನಿ ವತಿಯಿಂದ ಅಲ್ಲಿನ ಮಹಿಳಾ ಸಮಾಜ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ವಿನ್ನರ್ಸ್ ಆಗಿ ಹೊರ ಹೊಮ್ಮಿದೆ.

ಕನ್ನಡ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಹಾಡಿಗೆ ಯಕ್ಷಗಾನ, ಕೊಡವ ನೃತ್ಯ, ಕೋಲಾಟ, ಕಂಸಾಳೆ, ವೀರಗಾಸೆ, ಭರತನಾಟ್ಯ, ಡೊಳ್ಳು ಕುಣಿತವನ್ನು ಒಂದೇ ನೃತ್ಯ ಪ್ರಾಕಾರದಲ್ಲಿ ಪ್ರದರ್ಶಿಸಲಾಯಿತು. ಸಂಸ್ಥೆಯ ತರಬೇತುದಾರ ಮಹೇಶ್ ಮಾರ್ಗದರ್ಶನದಲ್ಲಿ ಜೂನಿಯರ್ ತಂಡದ ದಿಲನ್ ಆರ್., ಕುಡೆಕಲ್ ನಿಹಾಲ್, ಪೋಷಿತಾ, ತುಷಾರ, ಡಯಾನ, ಜೀವಿತ, ಅಭಿ, ಮೋಕ್ಷ ವಿ.ಎಲ್., ದಿಲನ್ ಹೆಚ್.ಆರ್., ಪ್ರಜ್ವಲ್ ಕ್ರಾಸ್ತಾ, ದಿಯಾ ದರ್ಶಿನಿ, ಗ್ರೀಷ್ಮ, ಅನುಕ್ತ, ಶಶಾಂಕ್, ವರ್ಣವಿ ನೃತ್ಯ ಪ್ರದರ್ಶನ ಮಾಡಿದರು.

ಸ್ಪರ್ಧೆಯನ್ನು ಮೈಸೂರಿನ ಸಾಯಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷೆ ಸಹನಾ ಉದ್ಘಾಟಿಸಿದರು. ಅತಿಥಿಗಳಾಗಿ ಮಡಿಕೇರಿಯ ಗುರುಕುಲ ಕಲಾ ಮಂಡಳಿಯ ಸ್ಥಾಪಕ ಪಿ.ಎನ್.ದಿನೇಶ್, ಸುಳ್ಯದ ಡಿ ಯುನೈಟೆಡ್‌ನ ನೃತ್ಯ ಸಂಯೋಜಕ ಅಭಿ ಕುಲಾಲ್, ಸಹಾಯಕ ನೃತ್ಯ ಸಂಯೋಜಕಿ ಆರ್.ವಿ.ಭೂಮಿಕಾ ಪಾಲ್ಗೊಂಡಿದ್ದರು.

ಸಮಾರೋಪ ಸಮಾರಂಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಪ.ಪಂ. ಅಧ್ಯಕ್ಷ ಪಿ.ಕೆ.ಚಂದ್ರು, ಸದಸ್ಯ ಎಂ.ವಿ.ಜೀವನ್, ಹಿಂ.ಜಾ.ವೇ. ಜಿಲ್ಲಾ ಉಪಾಧ್ಯಕ್ಷ ಸುಭಾಶ್, ಮಾಜಿ ಸೈನಿಕ ಎನ್. ವಿ.ಚಂದ್ರಶೇಖರ್, ಪೊಲೀಸ್ ನಿರೀಕ್ಷಕ ಬಿ.ಜೆ.ಮಹೇಶ್, ವಕೀಲ ಬಿ.ಜೆ ದೀಪಕ್, ಮೇಘನಾ ಡ್ರೈವಿಂಗ್  ಸ್ಕೂಲ್ ನ 

ಮಂಜುನಾಥ್ ಇನ್ನಿತರರು ಭಾಗವಹಿಸಿ ಬಹುಮಾನ ವಿತರಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು