8:13 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಐಕಾನ್ ವಿನ್ನರ್ಸ್ ಆಗಿ ಹೊರ ಹೊಮ್ಮಿದ ಕಿಂಗ್ಸ್ ಆಫ್ ಕೂರ್ಗ್

23/12/2021, 09:54

ಮಡಿಕೇರಿ(reporterkarnataka.com):

ಸೋಮವಾರಪೇಟೆಯ ಅಡ್ವೆಂಚರ್ ಡ್ಯಾನ್ಸ್ ಕಂಪೆನಿ ವತಿಯಿಂದ ಅಲ್ಲಿನ ಮಹಿಳಾ ಸಮಾಜ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ವಿನ್ನರ್ಸ್ ಆಗಿ ಹೊರ ಹೊಮ್ಮಿದೆ.

ಕನ್ನಡ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಹಾಡಿಗೆ ಯಕ್ಷಗಾನ, ಕೊಡವ ನೃತ್ಯ, ಕೋಲಾಟ, ಕಂಸಾಳೆ, ವೀರಗಾಸೆ, ಭರತನಾಟ್ಯ, ಡೊಳ್ಳು ಕುಣಿತವನ್ನು ಒಂದೇ ನೃತ್ಯ ಪ್ರಾಕಾರದಲ್ಲಿ ಪ್ರದರ್ಶಿಸಲಾಯಿತು. ಸಂಸ್ಥೆಯ ತರಬೇತುದಾರ ಮಹೇಶ್ ಮಾರ್ಗದರ್ಶನದಲ್ಲಿ ಜೂನಿಯರ್ ತಂಡದ ದಿಲನ್ ಆರ್., ಕುಡೆಕಲ್ ನಿಹಾಲ್, ಪೋಷಿತಾ, ತುಷಾರ, ಡಯಾನ, ಜೀವಿತ, ಅಭಿ, ಮೋಕ್ಷ ವಿ.ಎಲ್., ದಿಲನ್ ಹೆಚ್.ಆರ್., ಪ್ರಜ್ವಲ್ ಕ್ರಾಸ್ತಾ, ದಿಯಾ ದರ್ಶಿನಿ, ಗ್ರೀಷ್ಮ, ಅನುಕ್ತ, ಶಶಾಂಕ್, ವರ್ಣವಿ ನೃತ್ಯ ಪ್ರದರ್ಶನ ಮಾಡಿದರು.

ಸ್ಪರ್ಧೆಯನ್ನು ಮೈಸೂರಿನ ಸಾಯಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷೆ ಸಹನಾ ಉದ್ಘಾಟಿಸಿದರು. ಅತಿಥಿಗಳಾಗಿ ಮಡಿಕೇರಿಯ ಗುರುಕುಲ ಕಲಾ ಮಂಡಳಿಯ ಸ್ಥಾಪಕ ಪಿ.ಎನ್.ದಿನೇಶ್, ಸುಳ್ಯದ ಡಿ ಯುನೈಟೆಡ್‌ನ ನೃತ್ಯ ಸಂಯೋಜಕ ಅಭಿ ಕುಲಾಲ್, ಸಹಾಯಕ ನೃತ್ಯ ಸಂಯೋಜಕಿ ಆರ್.ವಿ.ಭೂಮಿಕಾ ಪಾಲ್ಗೊಂಡಿದ್ದರು.

ಸಮಾರೋಪ ಸಮಾರಂಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಪ.ಪಂ. ಅಧ್ಯಕ್ಷ ಪಿ.ಕೆ.ಚಂದ್ರು, ಸದಸ್ಯ ಎಂ.ವಿ.ಜೀವನ್, ಹಿಂ.ಜಾ.ವೇ. ಜಿಲ್ಲಾ ಉಪಾಧ್ಯಕ್ಷ ಸುಭಾಶ್, ಮಾಜಿ ಸೈನಿಕ ಎನ್. ವಿ.ಚಂದ್ರಶೇಖರ್, ಪೊಲೀಸ್ ನಿರೀಕ್ಷಕ ಬಿ.ಜೆ.ಮಹೇಶ್, ವಕೀಲ ಬಿ.ಜೆ ದೀಪಕ್, ಮೇಘನಾ ಡ್ರೈವಿಂಗ್  ಸ್ಕೂಲ್ ನ 

ಮಂಜುನಾಥ್ ಇನ್ನಿತರರು ಭಾಗವಹಿಸಿ ಬಹುಮಾನ ವಿತರಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು