8:30 PM Saturday19 - April 2025
ಬ್ರೇಕಿಂಗ್ ನ್ಯೂಸ್
Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ…

ಇತ್ತೀಚಿನ ಸುದ್ದಿ

ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ್ದ ಬಾಂಬ್ ಪ್ರಕರಣ: ಆರೋಪಿ ಆದಿತ್ಯ ರಾವ್ ಗೆ 20 ವರ್ಷ ಜೈಲು

16/03/2022, 22:37

ಮಂಗಳೂರು(reporterkarnataka.com): ಇಡೀ ಮಂಗಳೂರನ್ನೇ ತುದಿಗಾಲಿನಲ್ಲಿ ನಿಲ್ಲಿಸಿದ ಬಾಂಬ್ ಪ್ರಕರಣ ತೀರ್ಪು ಹೊರಬಿದ್ದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ಗೆ ದ.ಕ. ಜಿಲ್ಲಾ 4ನೇ ಹೆಚ್ಚುವರಿ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ಆದಿತ್ಯ ರಾವ್ 2020, ಜನವರಿ 20ರಂದು ಆಟೋರಿಕ್ಷಾವೊಂದರಲ್ಲಿ ಬಂದು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಸ್ಫೋಟಕ ತುಂಬಿದ್ದ ಬ್ಯಾಗೊಂದನ್ನು ಇಟ್ಟು ಅದೇ ರಿಕ್ಷಾದಲ್ಲಿ ಪರಾರಿಯಾಗಿದ್ದ. ಭದ್ರತಾ ಸಿಬ್ಬಂದಿಗಳು ಅನಾಥವಾಗಿರುವ ಬ್ಯಾಗನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅನಾಥ ಬ್ಯಾಗ್ ನ ವಿಷಯ ಹೊರಬರುತ್ತಿದ್ದಂತೆ ಕೆಲವು ಖಾಸಗಿ ವಾಹಿನಿಗಳು ಇಡೀ ದಿನ ಈ ಕುರಿತು ಊಹಾಪೋಹ ವರದಿ ಮಾಡಿದ್ದವು. ನಂತರ ಸಿಸಿ ಕ್ಯಾಮೆರಾ ಫೂಟೇಜ್ ನೋಡಿದ ಬಳಿಕ ಆರೋಪಿಯ ಸುಳಿವು ಪಡೆಯುವಲ್ಲಿ ಪೊಲೀಸರು ಯಶಸ್ವಿಯಾದರು. ಈ ನಡುವೆ ಆರೋಪಿ ಆದಿತ್ಯ ರಾವ್ ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕರ ಮುಂದೆ ಶರಣಾಗಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು