5:09 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಇದೆಲ್ಲ ಸುಳ್ಳು, ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿಲ್ಲ; ನನ್ನ ಲೈಫ್ ಹಾಳು ಮಾಡಲು ಯತ್ನಿಸುತ್ತಿದ್ದಾರೆ: ಡ್ಯಾನ್ಸರ್ ಕಿಶೋರ್

08/09/2021, 19:15

ಮಂಗಳೂರು(reporterkarnataka.com): ಚಲನಚಿತ್ರ ನಟಿ, ಆ್ಯಂಕರ್ ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು. ಖಾಸಗಿ ವಾಹಿನಿಯ ಶೋವೊಂದರ ಫೈನಲ್‍ನಲ್ಲಿ ಕೊರಿಯೋಗ್ರಾಫ್ ಮಾಡಿದ್ದೆ. ಆ ಬಳಿಕ ಅವರೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ಡ್ಯಾನ್ಸರ್ ಕಿಶೋರ್ ಅಮಣ್ಣಿ ಹೇಳಿದ್ದಾರೆ. 

ನಾನು ಡ್ರಗ್ಸ್ ಪೆಡ್ಲಿಂಗ್ ಮಾಡಲು ಹೋಗಿಲ್ಲ. ಯಾಕಂದ್ರೆ ನಮ್ಮ ವೃತ್ತಿಯೇ ಬೇರೆ. ಜಾರ್ಜ್ ಶೀಟ್‍ನಲ್ಲಿ ಸುಳ್ಳು ಹೇಳಿಕೆ ಹಾಕಲಾಗಿದೆ. ಪಾರ್ಟಿ ಬಿಡಿ ನಾವು ರಿಹರ್ಸಲ್ ಮಾಡಿ ಬರೋದೇ ಲೇಟ್ ನೈಟ್ ಆಗಿರೋದ್ರಿಂದ ನಾವು ಪಾರ್ಟಿ ಮಾಡಲು ಹೇಗೆ ಸಾಧ್ಯ ಎಂದು ಕಿಶೋರ್ ಪ್ರಶ್ನಿಸಿದ್ದಾರೆ.

ಅನುಶ್ರೀ ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಅವರಿಗೆ ತುಂಬಾ ಗೌರವ ಕೊಡುತ್ತೇವೆ. ನಾನು ಅವರ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ನಾನು ಅವರಿಗೆ ಬರೀ ಕೊರಿಯೋಗ್ರಾಫ್ ಮಾತ್ರ ಮಾಡಿದ್ದೇನೆ ಎಂದರು.

ನನ್ನ ಲೈಫ್ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಯಾರು ಈ ರೀತಿ ಮಾಡುತ್ತಿದ್ದಾರೆ ಗೊತ್ತಿಲ್ಲ. ಒಳ್ಳೆಯ ಕೊರಿಯೋಗ್ರಾಫರ್ ಆಗಬೇಕೆಂಬ ಕನಸು ನನಗಿದೆ. ಅದನ್ನು ಈಡೇರಿಸವಲ್ಲಿ ನಿರತನಾಗಿದ್ದೇನೆ. ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ, ತಪ್ಪು ಮಾಡಿಲ್ಲ. ಯಾರು ಈ ರೀತಿ ಮಾಡುತ್ತಾರೋ ಅವರಿಗೆ ಒಳ್ಳೆಯದಾಗಲಿ ಎಂದು ದುಃಖ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು