7:27 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಇದೆಲ್ಲ ಸುಳ್ಳು, ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿಲ್ಲ; ನನ್ನ ಲೈಫ್ ಹಾಳು ಮಾಡಲು ಯತ್ನಿಸುತ್ತಿದ್ದಾರೆ: ಡ್ಯಾನ್ಸರ್ ಕಿಶೋರ್

08/09/2021, 19:15

ಮಂಗಳೂರು(reporterkarnataka.com): ಚಲನಚಿತ್ರ ನಟಿ, ಆ್ಯಂಕರ್ ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು. ಖಾಸಗಿ ವಾಹಿನಿಯ ಶೋವೊಂದರ ಫೈನಲ್‍ನಲ್ಲಿ ಕೊರಿಯೋಗ್ರಾಫ್ ಮಾಡಿದ್ದೆ. ಆ ಬಳಿಕ ಅವರೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು ಡ್ಯಾನ್ಸರ್ ಕಿಶೋರ್ ಅಮಣ್ಣಿ ಹೇಳಿದ್ದಾರೆ. 

ನಾನು ಡ್ರಗ್ಸ್ ಪೆಡ್ಲಿಂಗ್ ಮಾಡಲು ಹೋಗಿಲ್ಲ. ಯಾಕಂದ್ರೆ ನಮ್ಮ ವೃತ್ತಿಯೇ ಬೇರೆ. ಜಾರ್ಜ್ ಶೀಟ್‍ನಲ್ಲಿ ಸುಳ್ಳು ಹೇಳಿಕೆ ಹಾಕಲಾಗಿದೆ. ಪಾರ್ಟಿ ಬಿಡಿ ನಾವು ರಿಹರ್ಸಲ್ ಮಾಡಿ ಬರೋದೇ ಲೇಟ್ ನೈಟ್ ಆಗಿರೋದ್ರಿಂದ ನಾವು ಪಾರ್ಟಿ ಮಾಡಲು ಹೇಗೆ ಸಾಧ್ಯ ಎಂದು ಕಿಶೋರ್ ಪ್ರಶ್ನಿಸಿದ್ದಾರೆ.

ಅನುಶ್ರೀ ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಅವರಿಗೆ ತುಂಬಾ ಗೌರವ ಕೊಡುತ್ತೇವೆ. ನಾನು ಅವರ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ.

ನಾನು ಅವರಿಗೆ ಬರೀ ಕೊರಿಯೋಗ್ರಾಫ್ ಮಾತ್ರ ಮಾಡಿದ್ದೇನೆ ಎಂದರು.

ನನ್ನ ಲೈಫ್ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಯಾರು ಈ ರೀತಿ ಮಾಡುತ್ತಿದ್ದಾರೆ ಗೊತ್ತಿಲ್ಲ. ಒಳ್ಳೆಯ ಕೊರಿಯೋಗ್ರಾಫರ್ ಆಗಬೇಕೆಂಬ ಕನಸು ನನಗಿದೆ. ಅದನ್ನು ಈಡೇರಿಸವಲ್ಲಿ ನಿರತನಾಗಿದ್ದೇನೆ. ನಾನು ಯಾರಿಗೂ ತೊಂದರೆ ಕೊಟ್ಟಿಲ್ಲ, ತಪ್ಪು ಮಾಡಿಲ್ಲ. ಯಾರು ಈ ರೀತಿ ಮಾಡುತ್ತಾರೋ ಅವರಿಗೆ ಒಳ್ಳೆಯದಾಗಲಿ ಎಂದು ದುಃಖ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು