4:05 AM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

ಮಂಗಳೂರು ಸಮೀಪ ಗುಂಪು ಹಲ್ಲೆಯಿಂದ ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆ: ಮೃತದೇಹ ವಯನಾಡಿಗೆ ರವಾನೆ

30/04/2025, 22:58

ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಸಮೀಪ ಗುಂಪು ಹಲ್ಲೆಗೊಳಗಾಗಿ ಸಾವನ್ನಪ್ಪಿದ ವ್ಯಕ್ತಿಯನ್ನು ಕೇರಳದ ವಯನಾಡು ಪುಳುಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್ (36) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ತಾಯ್ನಾಡಿಗೆ ಕಳುಹಿಸಲಾಗಿದೆ.
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ವಯನಾಡು ಶಾಸಕ ಟಿ. ಸಿದ್ದೀಕ್ ಅವರನ್ನು ಸಂಪರ್ಕಿಸಿದ್ದು, ರಾತ್ರಿ ಹೊತ್ತಿನಲ್ಲೇ ಮೃತನ ಸಹೋದರ ಅಬ್ದುಲ್ ಜಬ್ಬಾರ್ ಹಾಗೂ ಕುಟುಂಬಸ್ಥರು ಮಂಗಳೂರಿಗೆ ತಲುಪಿ ಮೃತ ದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಬಳಿಕ ಮೃತದೇಹವನ್ನು ಮಂಗಳೂರು ಬಂದರಿನ ಜೀನತ್ ಬಕ್ಷ್ ಜುಮಾ ಮಸೀದಿಯಲ್ಲಿ ಸ್ನಾನ ಮಾಡಿಸಿ, ಮಯ್ಯತ್ತ್ ನಮಾಜಿನ ವಿಧಿ ವಿಧಾನಗಳ ಪೂರ್ತಿಗೊಳಿಸಿ ನಂತರ ಬುಧವಾರ ಮುಂಜಾನೆ 5 ಗಂಟೆಗೆ ಪೊಲೀಸ್ ಜೀಪಿನ ಬೆಂಗಾಲಿನೊಂದಿಗೆ ಕೇರಳಕ್ಕೆ ಕೊಂಡೊಯ್ಯಲಾಯಿತು.

ಸ್ಪೀಕರ್ ಯು. ಟಿ. ಖಾದರ್ ಅವರ ನಿರ್ದೇಶನದಂತೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹಲ್ ಹಮೀದ್ ಕೆ.ಕೆ, ಮಾಜಿ ಮೇಯರ್ ಅಶ್ರಫ್ ಕೆ., ಸುಹೈಲ್ ಕಂದಕ್, ಸುನಿಲ್ ಬಜಲಕೇರಿ, ಹರ್ಷಾದ್ ವರ್ಕಾಡಿ, ಲಾರೆನ್ಸ್ ಡಿ’ಸೋಜ, ವಾಹಿದ್ ಕುದ್ರೋಳಿ ಮುಂತಾದವರು ಮುಂಜಾನೆವರೆಗೂ ಸ್ಥಳದಲ್ಲಿದ್ದು ಪ್ರಕ್ರಿಯೆಗಳಿಗೆ ನೆರವಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು