12:36 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ಸಮೀಪ ಗುಂಪು ಹಲ್ಲೆಯಿಂದ ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆ: ಮೃತದೇಹ ವಯನಾಡಿಗೆ ರವಾನೆ

30/04/2025, 22:58

ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಸಮೀಪ ಗುಂಪು ಹಲ್ಲೆಗೊಳಗಾಗಿ ಸಾವನ್ನಪ್ಪಿದ ವ್ಯಕ್ತಿಯನ್ನು ಕೇರಳದ ವಯನಾಡು ಪುಳುಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್ (36) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ತಾಯ್ನಾಡಿಗೆ ಕಳುಹಿಸಲಾಗಿದೆ.
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ವಯನಾಡು ಶಾಸಕ ಟಿ. ಸಿದ್ದೀಕ್ ಅವರನ್ನು ಸಂಪರ್ಕಿಸಿದ್ದು, ರಾತ್ರಿ ಹೊತ್ತಿನಲ್ಲೇ ಮೃತನ ಸಹೋದರ ಅಬ್ದುಲ್ ಜಬ್ಬಾರ್ ಹಾಗೂ ಕುಟುಂಬಸ್ಥರು ಮಂಗಳೂರಿಗೆ ತಲುಪಿ ಮೃತ ದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಬಳಿಕ ಮೃತದೇಹವನ್ನು ಮಂಗಳೂರು ಬಂದರಿನ ಜೀನತ್ ಬಕ್ಷ್ ಜುಮಾ ಮಸೀದಿಯಲ್ಲಿ ಸ್ನಾನ ಮಾಡಿಸಿ, ಮಯ್ಯತ್ತ್ ನಮಾಜಿನ ವಿಧಿ ವಿಧಾನಗಳ ಪೂರ್ತಿಗೊಳಿಸಿ ನಂತರ ಬುಧವಾರ ಮುಂಜಾನೆ 5 ಗಂಟೆಗೆ ಪೊಲೀಸ್ ಜೀಪಿನ ಬೆಂಗಾಲಿನೊಂದಿಗೆ ಕೇರಳಕ್ಕೆ ಕೊಂಡೊಯ್ಯಲಾಯಿತು.

ಸ್ಪೀಕರ್ ಯು. ಟಿ. ಖಾದರ್ ಅವರ ನಿರ್ದೇಶನದಂತೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹಲ್ ಹಮೀದ್ ಕೆ.ಕೆ, ಮಾಜಿ ಮೇಯರ್ ಅಶ್ರಫ್ ಕೆ., ಸುಹೈಲ್ ಕಂದಕ್, ಸುನಿಲ್ ಬಜಲಕೇರಿ, ಹರ್ಷಾದ್ ವರ್ಕಾಡಿ, ಲಾರೆನ್ಸ್ ಡಿ’ಸೋಜ, ವಾಹಿದ್ ಕುದ್ರೋಳಿ ಮುಂತಾದವರು ಮುಂಜಾನೆವರೆಗೂ ಸ್ಥಳದಲ್ಲಿದ್ದು ಪ್ರಕ್ರಿಯೆಗಳಿಗೆ ನೆರವಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು