4:22 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ಸಮೀಪ ಗುಂಪು ಹಲ್ಲೆಯಿಂದ ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆ: ಮೃತದೇಹ ವಯನಾಡಿಗೆ ರವಾನೆ

30/04/2025, 22:58

ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಸಮೀಪ ಗುಂಪು ಹಲ್ಲೆಗೊಳಗಾಗಿ ಸಾವನ್ನಪ್ಪಿದ ವ್ಯಕ್ತಿಯನ್ನು ಕೇರಳದ ವಯನಾಡು ಪುಳುಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್ (36) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ತಾಯ್ನಾಡಿಗೆ ಕಳುಹಿಸಲಾಗಿದೆ.
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ವಯನಾಡು ಶಾಸಕ ಟಿ. ಸಿದ್ದೀಕ್ ಅವರನ್ನು ಸಂಪರ್ಕಿಸಿದ್ದು, ರಾತ್ರಿ ಹೊತ್ತಿನಲ್ಲೇ ಮೃತನ ಸಹೋದರ ಅಬ್ದುಲ್ ಜಬ್ಬಾರ್ ಹಾಗೂ ಕುಟುಂಬಸ್ಥರು ಮಂಗಳೂರಿಗೆ ತಲುಪಿ ಮೃತ ದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಬಳಿಕ ಮೃತದೇಹವನ್ನು ಮಂಗಳೂರು ಬಂದರಿನ ಜೀನತ್ ಬಕ್ಷ್ ಜುಮಾ ಮಸೀದಿಯಲ್ಲಿ ಸ್ನಾನ ಮಾಡಿಸಿ, ಮಯ್ಯತ್ತ್ ನಮಾಜಿನ ವಿಧಿ ವಿಧಾನಗಳ ಪೂರ್ತಿಗೊಳಿಸಿ ನಂತರ ಬುಧವಾರ ಮುಂಜಾನೆ 5 ಗಂಟೆಗೆ ಪೊಲೀಸ್ ಜೀಪಿನ ಬೆಂಗಾಲಿನೊಂದಿಗೆ ಕೇರಳಕ್ಕೆ ಕೊಂಡೊಯ್ಯಲಾಯಿತು.

ಸ್ಪೀಕರ್ ಯು. ಟಿ. ಖಾದರ್ ಅವರ ನಿರ್ದೇಶನದಂತೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹಲ್ ಹಮೀದ್ ಕೆ.ಕೆ, ಮಾಜಿ ಮೇಯರ್ ಅಶ್ರಫ್ ಕೆ., ಸುಹೈಲ್ ಕಂದಕ್, ಸುನಿಲ್ ಬಜಲಕೇರಿ, ಹರ್ಷಾದ್ ವರ್ಕಾಡಿ, ಲಾರೆನ್ಸ್ ಡಿ’ಸೋಜ, ವಾಹಿದ್ ಕುದ್ರೋಳಿ ಮುಂತಾದವರು ಮುಂಜಾನೆವರೆಗೂ ಸ್ಥಳದಲ್ಲಿದ್ದು ಪ್ರಕ್ರಿಯೆಗಳಿಗೆ ನೆರವಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು