1:19 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಈಡಿಗರ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಎಂಪಿ ಟಿಕೆಟ್ ಆಫರ್: ನಟ ಶಿವರಾಜ್ ಕುಮಾರ್ ಹೇಳಿದ್ದೇನು?

10/12/2023, 23:51

ಬೆಂಗಳೂರು(reporterkarnataka.com):ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ 75 ನೇ ವರ್ಷದ ಅಮೃತ ಮಹೋತ್ಸವದ ಬೃಹತ್ ಜಾಗೃತ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು.
ಸರ್ಕಾರಕ್ಕೆ ಸಮಾಜದ ವತಿಯಿಂದ ಹಲವು ಬೇಡಿಕೆಗಳನ್ನು ನೀಡಲಾಯಿತು. ಈಡಿಗ ಸಮಾಜ ಇನ್ನೂ ಹೆಚ್ಚಿನ ಸಂಘಟನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲಿ, ನಾರಾಯಣ ಗುರುಗಳ ಆದರ್ಶಗಳನ್ನು ಎಲ್ಲರೂ ಸದಾ ಪಾಲಿಸೋಣ ಎಂದು ಸಂಘದ ಅಮೃತ ಮಹೋತ್ಸವಕ್ಕೆಗಣ್ಯರು
ಶುಭ ಕೋರಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡುತ್ತಿದ್ದಾಗ ನಟ ಶಿವರಾಜ್ ಕುಮಾರ್ ಅವರನ್ನು ಉದ್ದೇಶಿಸಿ, ಮುಂಬರುವ ಲೋಕಸಭೆ ಚುನಾವಣೆಗೆ ನಿಲ್ಲಲ್ಲು ಸಿದ್ಧರಾಗಿ ಎಂದು ಹೇಳಿದರು. ಆದರೆ ನಟ ಶಿವರಾಜ್ ಕುಮಾರ್ ಅವರು ಇದೇ ಸಮಾರಂಭದಲ್ಲಿ ಉತ್ತರ ನೀಡಿ, ತಂದೆಯವರು ಬಣ್ಣ ಮಾತ್ರ ಹಚ್ಚಬೇಕು. ಆ್ಯಕ್ಟ್ ಮಾತ್ರ ಮಾಡಬೇಕು. ನಟನೆಯ ಮೂಲಕ ಜನರನ್ನು ರಂಜಿಸುವುದಷ್ಟೇ ನಮ್ಮ ಕೆಲಸ ಎಂದು ಹೇಳುತ್ತಿದ್ದರು ಎನ್ನುವ ಮೂಲಕ ನಯವಾಗಿ ರಾಜಕೀಯವನ್ನು
ನಿರಾಕರಿಸಿದರು. ಪತ್ನಿ ಗೀತಾಗೆ ರಾಜಕೀಯದ ಬಗ್ಗೆ ಒಲವಿದೆ. ಅವರು ಈ ಹಾದಿಯಲ್ಲಿ ಮುಂದುವರಿಯಲಿ ಎಂದು ಶಿವರಾಜ್ ಕುಮಾರ್ ಹೇಳಲು ಮರೆಯಲಿಲ್ಲ.
ವರನಟ ರಾಜ್ ಕುಮಾರ್ ಅವರಿಗೂ ಪ್ರಮುಖ ರಾಜಕೀಯ ಪಕ್ಷಗಳು ಆಫರ್ ನೀಡಿತ್ತು. ಆದರೆ ರಾಜ್ ಕುಮಾರ್ ಅವರು ರಾಜಕೀಯಕ್ಕೆ ಬರಲು ನಿರಾಕರಿಸಿದ್ದರು. ರಾಜ್ ಕುಮಾರ್ ಅವರು ಮನಸ್ಸು ಮಾಡುತ್ತಿದ್ದರೆ ಅವರಿಗೆ ರಾಜ್ಯದ ಮುಖ್ಯಮಂತ್ರಿ ಆಗಬಹುದಿತ್ತು. ಆದರೆ ಅವರು ನಟನಾಗಿ ರಾಜಕೀಯ ಪ್ರವೇಶಿಸುವುದನ್ನು ಒಪ್ಪುತ್ತಿರಲಿಲ್ಲ.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ‌ ಶಿಕ್ಷಣ ಹಾಗೂ ಸಾಕ್ಷರತಾ‌ ಇಲಾಖೆ‌ ಸಚಿವ ಎಸ್.ಮಧು ಬಂಗಾರಪ್ಪ, ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ,
ನಟರಾದ ಡಾ.ಶಿವರಾಜ್ ಕುಮಾರ್, ಶ್ರೀಮುರುಳಿ, ಈಡಿಗ ಸಂಘದ ರಾಜ್ಯಾಧ್ಯಕ್ಷ ತಿಮ್ಮೇಗೌಡ, ಶಾಸಕ ಎಚ್.ಆರ್ ಗವಿಯಪ್ಪ, ಶಿರಸಿ ಶಾಸಕರಾದ ಭೀಮಣ್ಣ ನಾಯ್ಕ್ , ಸಮಾಜದ ಅನೇಕ ಸ್ವಾಮೀಜಿಗಳು ಮತ್ತು ಸಮಾಜದ ಅನೇಕ ಮುಖಂಡರುಗಳು,ಮಾಜಿ ಶಾಸಕರು, ಮಾಜಿ ಸಚಿವರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು