6:24 PM Wednesday11 - March 2026
ಬ್ರೇಕಿಂಗ್ ನ್ಯೂಸ್
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಇತ್ತೀಚಿನ ಸುದ್ದಿ

ಈಡಿಗರ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಎಂಪಿ ಟಿಕೆಟ್ ಆಫರ್: ನಟ ಶಿವರಾಜ್ ಕುಮಾರ್ ಹೇಳಿದ್ದೇನು?

10/12/2023, 23:51

ಬೆಂಗಳೂರು(reporterkarnataka.com):ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ 75 ನೇ ವರ್ಷದ ಅಮೃತ ಮಹೋತ್ಸವದ ಬೃಹತ್ ಜಾಗೃತ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು.
ಸರ್ಕಾರಕ್ಕೆ ಸಮಾಜದ ವತಿಯಿಂದ ಹಲವು ಬೇಡಿಕೆಗಳನ್ನು ನೀಡಲಾಯಿತು. ಈಡಿಗ ಸಮಾಜ ಇನ್ನೂ ಹೆಚ್ಚಿನ ಸಂಘಟನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲಿ, ನಾರಾಯಣ ಗುರುಗಳ ಆದರ್ಶಗಳನ್ನು ಎಲ್ಲರೂ ಸದಾ ಪಾಲಿಸೋಣ ಎಂದು ಸಂಘದ ಅಮೃತ ಮಹೋತ್ಸವಕ್ಕೆಗಣ್ಯರು
ಶುಭ ಕೋರಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡುತ್ತಿದ್ದಾಗ ನಟ ಶಿವರಾಜ್ ಕುಮಾರ್ ಅವರನ್ನು ಉದ್ದೇಶಿಸಿ, ಮುಂಬರುವ ಲೋಕಸಭೆ ಚುನಾವಣೆಗೆ ನಿಲ್ಲಲ್ಲು ಸಿದ್ಧರಾಗಿ ಎಂದು ಹೇಳಿದರು. ಆದರೆ ನಟ ಶಿವರಾಜ್ ಕುಮಾರ್ ಅವರು ಇದೇ ಸಮಾರಂಭದಲ್ಲಿ ಉತ್ತರ ನೀಡಿ, ತಂದೆಯವರು ಬಣ್ಣ ಮಾತ್ರ ಹಚ್ಚಬೇಕು. ಆ್ಯಕ್ಟ್ ಮಾತ್ರ ಮಾಡಬೇಕು. ನಟನೆಯ ಮೂಲಕ ಜನರನ್ನು ರಂಜಿಸುವುದಷ್ಟೇ ನಮ್ಮ ಕೆಲಸ ಎಂದು ಹೇಳುತ್ತಿದ್ದರು ಎನ್ನುವ ಮೂಲಕ ನಯವಾಗಿ ರಾಜಕೀಯವನ್ನು
ನಿರಾಕರಿಸಿದರು. ಪತ್ನಿ ಗೀತಾಗೆ ರಾಜಕೀಯದ ಬಗ್ಗೆ ಒಲವಿದೆ. ಅವರು ಈ ಹಾದಿಯಲ್ಲಿ ಮುಂದುವರಿಯಲಿ ಎಂದು ಶಿವರಾಜ್ ಕುಮಾರ್ ಹೇಳಲು ಮರೆಯಲಿಲ್ಲ.
ವರನಟ ರಾಜ್ ಕುಮಾರ್ ಅವರಿಗೂ ಪ್ರಮುಖ ರಾಜಕೀಯ ಪಕ್ಷಗಳು ಆಫರ್ ನೀಡಿತ್ತು. ಆದರೆ ರಾಜ್ ಕುಮಾರ್ ಅವರು ರಾಜಕೀಯಕ್ಕೆ ಬರಲು ನಿರಾಕರಿಸಿದ್ದರು. ರಾಜ್ ಕುಮಾರ್ ಅವರು ಮನಸ್ಸು ಮಾಡುತ್ತಿದ್ದರೆ ಅವರಿಗೆ ರಾಜ್ಯದ ಮುಖ್ಯಮಂತ್ರಿ ಆಗಬಹುದಿತ್ತು. ಆದರೆ ಅವರು ನಟನಾಗಿ ರಾಜಕೀಯ ಪ್ರವೇಶಿಸುವುದನ್ನು ಒಪ್ಪುತ್ತಿರಲಿಲ್ಲ.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ‌ ಶಿಕ್ಷಣ ಹಾಗೂ ಸಾಕ್ಷರತಾ‌ ಇಲಾಖೆ‌ ಸಚಿವ ಎಸ್.ಮಧು ಬಂಗಾರಪ್ಪ, ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ,
ನಟರಾದ ಡಾ.ಶಿವರಾಜ್ ಕುಮಾರ್, ಶ್ರೀಮುರುಳಿ, ಈಡಿಗ ಸಂಘದ ರಾಜ್ಯಾಧ್ಯಕ್ಷ ತಿಮ್ಮೇಗೌಡ, ಶಾಸಕ ಎಚ್.ಆರ್ ಗವಿಯಪ್ಪ, ಶಿರಸಿ ಶಾಸಕರಾದ ಭೀಮಣ್ಣ ನಾಯ್ಕ್ , ಸಮಾಜದ ಅನೇಕ ಸ್ವಾಮೀಜಿಗಳು ಮತ್ತು ಸಮಾಜದ ಅನೇಕ ಮುಖಂಡರುಗಳು,ಮಾಜಿ ಶಾಸಕರು, ಮಾಜಿ ಸಚಿವರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು