9:38 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಐಗಳ ಮಲ್ಲಾಪುರ; ಸಮರ್ಪಕವಾಗಿ ನೀರು ಪೂರೈಸದಿದ್ದಲ್ಲಿ ಗ್ರಾಪಂ ಗೆ ಬೀಗ: ಎಐಕೆಎಸ್ ಎಚ್ಚರಿಕೆ

14/06/2022, 19:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು, ಚೌಡಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಸಮರ್ಪಕವಾಗಿ ಕುಡಿಯಲು ನೀರು ಪೂರೈಸಬೇಕೆಂದು ಅಖಿಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. 

ಸಂಬಂಧಿಸಿದಂತೆ ಕೆಲ ಗ್ರಾಮಸ್ಥರು ಚೌಡಾಪುರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಹಕ್ಕೋತ್ತಾಯ ಪತ್ರ ನೀಡಿದ್ದು, ಅಭಿವೃದ್ಧಿ ಅಧಿಕಾರಿ ಅನಿಪಸ್ಥಿತಿಯಲ್ಲಿ ಬಿಲ್ ಕಲೆಕ್ಟರ್ ಕಮ್ಮಾರ ನಾಗರಾಜ ರವರಿಗೆ ನೀಡಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿ ನೀರನ್ನು ಸಮರ್ಪಕವಾಗಿ ಪೂರೈಸುತ್ತಿಲ್ಲ, ನೀರಗಂಟಿ ತನ್ನ ಕರ್ಥವ್ಯ ಸರಿಯಾಗಿ ನಿರ್ವಹಿಸುತ್ತಿಲ್ಲ, ನೀರಿನ ತೊಟ್ಟಿಯ ಸುತ್ತ ಮುತ್ತ ದಪ್ಪ ಪಾಚಿ ಬೆಳೆದು ಹಿರಿಯರು ಮಹಿಳೆಯರು, ಮಕ್ಕಳು ಬಿದ್ದು ಗಾಯಗೊಂಡಿದ್ದಾರೆ. ಮತ್ತು ಗ್ರಾಮದ ಬಹುತೇಕ ನಳಗಳಿಗೆ ಟ್ಯಾಪ್ ಹಾಕಿಸಿಲ್ಲ, ನೀರಿನ ಟ್ಯಾಂಕ್ ಮತ್ತು ನೀರಿನ ತೊಟ್ಟಿ ಸ್ವಚ್ಚಗೊಳಿಸಿಲ್ಲ, ಪರಿಣಾಮ ಬಹುತೇಕ ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳಿಂದ ನರಳುಂವತಾಗಿದೆ. ಕಾರಣ ಮೊದಲು ನೀರಿನ ಟ್ಯಾಂಕ್ ಸ್ವಚ್ಚಗೊಳಿಸಿಬೇಕು,  ನೀರಿನ ತೊಟ್ಟಿ ಸ್ವಚ್ಚಗೊಳಿಸಿ ಸುತ್ತಲೂ ಸ್ವಚ್ಚಗೊಳಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಕುರಿತು ಗ್ರಾಪಂ ಅಭಿವೃದ್ಧಿ ಅಧಿಕಾರಿ ಶೀಘ್ರವೇ ಕ್ರಮ ಜರುಗಿಸಬೇಕು, ನಿರ್ಲಕ್ಷ್ಯ ತೋರಿದ್ದಲ್ಲಿ ಗ್ರಾಪಂ ಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಈ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ. ಅಖಿಲ ಭಾರತ ಕಿಸಾನ್ ಸಭಾ ಮುಖಂಡ ಕೆ.ಓಬಳೇಶ, ಉಳ್ಳಂಗಿ ಕುಬೇರ, ಹೊನ್ನೂರಪ್ಪ,ಬೊಮ್ಮಣ್ಣ, ಕೆ.ಪಾಪನಾಯಕ, ಡಿ.ಪಾಪನಾಯಕ, ಜಗಳೂರಪ್ಪ, ಪಂಚಾರ ಶಾಪ್ ಓಬಳೇಶ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು