8:05 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಐಕಳ ಮನೆ ಕಳ್ಳತನ ಪ್ರಕರಣ: ಸಿಸಿಬಿ ಕಾರ್ಯಾಚರಣೆ; ಮತ್ತೋರ್ವ ಆರೋಪಿಯ ದಸ್ತಗಿರಿ; ಬಂಧಿತರ ಸಂಖ್ಯೆ 3ಕ್ಕೇರಿಕೆ

18/07/2023, 20:19

ಮಂಗಳೂರು(reporterkarnataka.com): ನಗರದ ಹೊರವಲಯದ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಐಕಳದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 3ಕ್ಕೇರಿದೆ.
ಜನವರಿ 1 ಮತ್ತು 2ರ ಮಧ್ಯೆ ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಚಂದ್ರಿಕಾ ಹೆಸರಿನ ಮನೆಯ ಎದುರಿನ ಬಾಗಿಲಿನ ಲಾಕನ್ನು ಮುರಿದು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವು ಮಾಡಲಾಗಿತ್ತು. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು.
ಈ ಪ್ರಕರಣದಲ್ಲಿ ತನಿಖೆ ಕೈಗೊಂಡ ಸಿಸಿಬಿ ಎಸಿಪಿ ಪಿ. ಎ. ಹೆಗಡೆ ನೇತ್ರತ್ವದ ಸಿಸಿಬಿ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ರೂ. 56,50,000/-ಚಿನ್ನಾಭರಣಗಳು, ಮೊಬೈಲ್ ಫೋನ್ ಹಾಗೂ ಇತರ ಸೊತ್ತುಗಳನ್ನು ಈಗಾಗಲೇ ವಶಪಡಿಸಿಕೊಂಡಿದ್ದರು. ಇದೀಗ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಕಳವು ಮಾಡಿದ ಮನೆಯನ್ನು ತೋರಿಸಿಕೊಟ್ಟು ಕಳವಿನ ಸಹಕರಿಸಿದ ಆರೋಪಿಯಾದ ಬೊಂಡತಿಲ ನಿವಾಸಿಯಾದ
ಮಹಮ್ಮದ್ ಶರೀಪ್(40) ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿ ಆತನ ವಶದಿಂದ ಚಿನ್ನದ ಪೆಂಡೆಂಡ್ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು