12:02 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ…

ಇತ್ತೀಚಿನ ಸುದ್ದಿ

ಇಲಕಲ್: ಜು. 30ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಬಾಗಲಕೋಟೆ ಜಿಲ್ಲಾ ಘಟಕ ಉದ್ಘಾಟನೆ

29/07/2023, 12:32

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ

info.reporterkarnataka@gmail.com

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು, ಇಲಕಲ್ ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬಾಗಲಕೋಟೆ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ವಿಶ್ವ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ಡಾ. ಬಾಬು ಜಗಜೀವನ್ ರಾವ್ ಭವನದಲ್ಲಿ ಆಯೋಜಿಸಲಾಗಿದೆ.
ಅಧ್ಯಕ್ಷತೆಯನ್ನು ಡಾ. ಸೀತೆಮ್ ವಜ್ಜಲ್ (ಜಿಲ್ಲಾಧ್ಯಕ್ಷರು ಹಾಗೂ ಬಸವಕ್ರಾಂತಿ ಸಂಪಾದಕ ಸಿದ್ದನಗೌಡ ಪಾಟೀಲ್) ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಪ್ರಸ್ತಾವಿಕ ಮಾತನಾಡಲಿದ್ದಾರೆ.
ಇಲಕಲ್ಲಿನ ಪೂಜ್ಯರು ಶ್ರೀಮಾ. ನಿ. ಪ್ರ. ಗುರು ಮಹಾಂತ ಸ್ವಾಮಿಗಳು (ಚಿತ್ತರಗಿ ಸಂಸ್ಥಾನ ಇಲ್ಕಲ್),ಸಾನಿಧ್ಯ ಪೂಜ್ಯಶ್ರೀ ಜ್ಞಾನಪೀಠ ಸ್ವಾಮಿಗಳು (ಉರಿಲಿಂಗ ಪೆದ್ದಿ ಮಠ ಮೈಸೂರು) ಉಪಸ್ಥಿತರಿರುವರು. ಶಾಸಕ ಹುನಗುಂದ ವಿಜಯಾನಂದ ಎಸ್. ಕಾಶಪ್ಪನವರ್ ಜ್ಯೋತಿ ಬೆಳಗಿಸಲಿರುವರು. ಮಾಜಿ ಶಾಸಕ
ದೊಡ್ಡನಗೌಡ ಬಿ ಪಾಟೀಲ್ , ಎಸ್ ಆರ್ ನವಲಿ ಹಿರೇಮಠ ಭಾಗವಹಿಸಲಿರುವರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ದ್ವನಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸಾಕ್ ಪ್ರಸ್ತಾವನೆ ಮಾಡಲಿದ್ದಾರೆ. ರಾಜ್ಯದ ಎಲ್ಲ ತಾಲೂಕು, ಜಿಲ್ಲಾ ಘಟಕದಿಂದ ಸುಮಾರು 2000ಕ್ಕೂ ಹೆಚ್ಚು ಪತ್ರಕರ್ತರ ಭಾಗವಹಿಸುವಲಿದ್ದಾರೆ ಎಂದು ಮಸ್ಕಿ ತಾಲೂಕು ಕರ್ನಾಟಕ ಕಾರ್ಯ ನಿರ್ವಹ ಪತ್ರಕರ್ತರ ಧ್ವನಿ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು