8:42 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

ಇಲಕಲ್: ಜು. 30ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಬಾಗಲಕೋಟೆ ಜಿಲ್ಲಾ ಘಟಕ ಉದ್ಘಾಟನೆ

29/07/2023, 12:32

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ

info.reporterkarnataka@gmail.com

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು, ಇಲಕಲ್ ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬಾಗಲಕೋಟೆ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ವಿಶ್ವ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ಡಾ. ಬಾಬು ಜಗಜೀವನ್ ರಾವ್ ಭವನದಲ್ಲಿ ಆಯೋಜಿಸಲಾಗಿದೆ.
ಅಧ್ಯಕ್ಷತೆಯನ್ನು ಡಾ. ಸೀತೆಮ್ ವಜ್ಜಲ್ (ಜಿಲ್ಲಾಧ್ಯಕ್ಷರು ಹಾಗೂ ಬಸವಕ್ರಾಂತಿ ಸಂಪಾದಕ ಸಿದ್ದನಗೌಡ ಪಾಟೀಲ್) ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಪ್ರಸ್ತಾವಿಕ ಮಾತನಾಡಲಿದ್ದಾರೆ.
ಇಲಕಲ್ಲಿನ ಪೂಜ್ಯರು ಶ್ರೀಮಾ. ನಿ. ಪ್ರ. ಗುರು ಮಹಾಂತ ಸ್ವಾಮಿಗಳು (ಚಿತ್ತರಗಿ ಸಂಸ್ಥಾನ ಇಲ್ಕಲ್),ಸಾನಿಧ್ಯ ಪೂಜ್ಯಶ್ರೀ ಜ್ಞಾನಪೀಠ ಸ್ವಾಮಿಗಳು (ಉರಿಲಿಂಗ ಪೆದ್ದಿ ಮಠ ಮೈಸೂರು) ಉಪಸ್ಥಿತರಿರುವರು. ಶಾಸಕ ಹುನಗುಂದ ವಿಜಯಾನಂದ ಎಸ್. ಕಾಶಪ್ಪನವರ್ ಜ್ಯೋತಿ ಬೆಳಗಿಸಲಿರುವರು. ಮಾಜಿ ಶಾಸಕ
ದೊಡ್ಡನಗೌಡ ಬಿ ಪಾಟೀಲ್ , ಎಸ್ ಆರ್ ನವಲಿ ಹಿರೇಮಠ ಭಾಗವಹಿಸಲಿರುವರು.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ದ್ವನಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸಾಕ್ ಪ್ರಸ್ತಾವನೆ ಮಾಡಲಿದ್ದಾರೆ. ರಾಜ್ಯದ ಎಲ್ಲ ತಾಲೂಕು, ಜಿಲ್ಲಾ ಘಟಕದಿಂದ ಸುಮಾರು 2000ಕ್ಕೂ ಹೆಚ್ಚು ಪತ್ರಕರ್ತರ ಭಾಗವಹಿಸುವಲಿದ್ದಾರೆ ಎಂದು ಮಸ್ಕಿ ತಾಲೂಕು ಕರ್ನಾಟಕ ಕಾರ್ಯ ನಿರ್ವಹ ಪತ್ರಕರ್ತರ ಧ್ವನಿ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು