9:44 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ

08/07/2026, 12:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ನಾಗರಹೊಳೆ ಉದ್ಯಾನದ ಬೀಟ್ ಗಾರ್ಡ್ ತನ್ನ ಮನೆಯಲ್ಲಿ ಅಕ್ರಮವಾಗಿ ಜಿಂಕೆಯನ್ನು ಇಟ್ಟುಕೊಂಡಿದ್ದನ್ನು ಬೆಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ಪತ್ತೆ ಹಚ್ಚಿ ಆತನನ್ನು ಬಂಧಿಸಿದ್ದಲ್ಲದೆ. ಆರೋಪಿಯು ಅನಧಿಕೃತವಾಗಿ ಇರಿಸಿಕೊಂಡಿದ್ದ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

ನಾಗರಹೊಳೆ ಉದ್ಯಾನವನದ ಹುಣಸೂರು ವನ್ಯಜೀವಿ ವಲಯದ ಬೀಟ್‌ಗಾರ್ಡ್ ಪೊನ್ನಪ್ಪ ಬಂಧಿತ ಆರೋಪಿ, ಈತನ ಮನೆಯಲ್ಲಿದ್ದ ಸ್ನೇಹಿತರ ಬಂದೂಕನ್ನು ಸಹ ವಶಕ್ಕೆ ಪಡೆಯಲಾಗಿದೆ.
ಆರೋಪಿ ಪೊನ್ನಪ್ಪ ಉದ್ಯಾನದಂಚಿನಲ್ಲೇ ತನ್ನ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿದ್ದು, ಅಲ್ಲಿ ಜಿಂಕೆಯನ್ನು ಸಾಕುತ್ತಿರುವ ಹಾಗೂ ಈತ ಕೆಲವರೊಂದಿಗೆ ಸೇರಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದಾನೆಂದು ಬೆಂಗಳೂರಿನ ಅರಣ್ಯ ಸಂಚಾರಿ ದಳಕ್ಕೆ ಬಂದ ಖಚಿತ ಮಾಹಿತಿ ಮೇರೆಗೆ ಸೋಮವಾರ ಪೊನ್ನಪ್ಪನ ಮನೆಯ ಮೇಲೆ ದಾಳಿ ನಡೆಸಿದ ವೇಳೆ ಮನೆಯ ಕೊಟ್ಟಿಗೆಯಲ್ಲಿ ಜಿಂಕೆ ಇರುವುದು ಹಾಗೂ ಮತ್ತೊಬ್ಬರಿಗೆ ಸೇರಿದ ಬಂದೂಕು ಪತ್ತೆಯಾಗಿದೆ. ಆದರೆ ಯಾವುದೇ ಮಾಂಸ ಪತ್ತೆಯಾಗಿಲ್ಲ.
ಅಧಿಕಾರಿಗಳ ದೌಡು:
ಈ ಬಗ್ಗೆ ನಾಗರಹೊಳೆ ಹುಲಿ ಯೋಜನೆ ನಿರ್ದೇಶಕಿ ಪಿ.ಎ.ಸೀಮಾರಿಗೆ ಸಂಚಾರಿ ದಳದ ಅಧಿಕಾರಿಗಳು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಎಸಿಎಫ್ ಲಕ್ಷ್ಮೀಕಾಂತ್, ಆರ್‌ಎಫ್‌ಓ ಸುಬ್ರಮಣ್ಯರೊಂದಿಗೆ ಭೇಟಿ ಇತ್ತು ಪರಿಶೀಲಿಸಿದರು.

*ಜಿಂಕೆ ರಕ್ಷಣೆ, ಬಂದೂಕು ವಶ, ಆರೋಪಿ ಬಂಧನ:*
ಆರೋಪಿ ಬೀಟ್‌ಗಾರ್ಡ್ ಪೊನ್ನಪ್ಪ ಜಿಂಕೆಗೆ ಗಾಯವಾಗಿದ್ದರಿಂದ ಕಳೆದ ಮೂರು ತಿಂಗಳಿನಿಂದ ಚಿಕಿತ್ಸೆ ನೀಡುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾನೆ. ಗಾಯಗೊಂಡಿರುವ ಜಿಂಕೆಯನ್ನು ರಕ್ಷಿಸಿ ಕೂರ್ಗಳ್ಳಿ ವನ್ಯಜೀವಿ ಪುನರ್ ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

*ಗಾರ್ಡ್ ವಿರುದ್ದ ಕ್ರಮ:* ಇಲಾಖೆಗೆ ಯಾವುದೇ ಮಾಹಿತಿ ನೀಡದೆ ಬೀಟ್‌ಗಾರ್ಡ್ ಪೊನ್ನಪ್ಪ ಜಿಂಕೆ ಸಾಕುತ್ತಿರುವುದು, ಮನೆಯಲ್ಲಿ ಬಂದೂಕು ಹೊಂದಿರುವುದು ಅಪರಾಧವಾಗಿದೆ. ಆದರೆ ಮನೆಯಲ್ಲಿ ಯಾವುದೇ ಪ್ರಾಣಿ ಮಾಂಸ ಪತ್ತೆಯಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು