12:43 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಅಕ್ರಮ ಗಣಿಗಾರಿಕೆ: ತಿರುಪತಿ ತಿಮ್ಮಪ್ಪನಿಗೆ 45 ಕೋಟಿ ರೂ.ಗಳ ಕಿರೀಟ ಸಮರ್ಪಿಸಿದ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

06/05/2025, 21:30

ಹೈದರಾಬಾದ್(reporterkarnataka.com): ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ
884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಗಂಗಾವತಿ ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
13 ವರ್ಷಗಳ ದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಐಪಿಸಿ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆ.13(2) ಜೊತೆಗೆ 13(1)(d) ಅಡಿ ಜನಾರ್ದನ ರೆಡ್ಡಿ ಮೇಲಿನ
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ.
ಜನಾರ್ದನ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆ ಹಾಗೂ ಹಾಲಿ ಶಾಸಕ ಎಂಬುದನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ನ್ಯಾಯಾಲಯಕ್ಕೆ
ಮನವಿ ಮಾಡಿದ್ದರು. ಆದರೆ, ಸಿಬಿಐ ವಿಶೇಷ ಕೋರ್ಟ್ ಮನವಿಯನ್ನು ತಿರಸ್ಕರಿಸಿದೆ. ಜನಾರ್ದನ ರೆಡ್ಡಿ ಎಸಗಿರುವ ಅಪರಾಧವು ಜೀವಾವಧಿ ಶಿಕ್ಷೆಗೆ ಯೋಗ್ಯವಾದದ್ದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದರಿಂದ ಜನಾರ್ದನ ರೆಡ್ಡಿ ಮತ್ತೆ ಜೈಲು ಸೇರಬೇಕಾಗುತ್ತದೆ.
ಜನಾರ್ದನ ರೆಡ್ಡಿಯವರು ತಿರುಪತಿ ತಿಮ್ಮಪ್ಪನಿಗೆ 45
ಕೋಟಿ ರೂ.ಗಳ ವಜ್ರದ ಕಿರೀಟ ಅರ್ಪಿಸಿರುವುದನ್ನು ಸ್ಮರಿಸಬಹುದು. ಅಪರಾಧ ಎಸಗಿ ಯಾವುದೇ ದೇವರಿಗೆ ಮೊರೆ ಹೋದರೂ ಪ್ರಯೋಜನವಿಲ್ಲ, ಮಾಡಿದ ಕರ್ಮವನ್ನು ಅನುಭವಿಸಲೇ ಬೇಕೆನ್ನುವುದು ತೀರ್ಪಿನಿಂದ ಮತ್ತೊಮ್ಮೆ ಸಾಬೀತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು