3:44 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಅಕ್ರಮ ಗಣಿಗಾರಿಕೆ: ತಿರುಪತಿ ತಿಮ್ಮಪ್ಪನಿಗೆ 45 ಕೋಟಿ ರೂ.ಗಳ ಕಿರೀಟ ಸಮರ್ಪಿಸಿದ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

06/05/2025, 21:30

ಹೈದರಾಬಾದ್(reporterkarnataka.com): ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ
884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಗಂಗಾವತಿ ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
13 ವರ್ಷಗಳ ದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಐಪಿಸಿ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆ.13(2) ಜೊತೆಗೆ 13(1)(d) ಅಡಿ ಜನಾರ್ದನ ರೆಡ್ಡಿ ಮೇಲಿನ
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ.
ಜನಾರ್ದನ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆ ಹಾಗೂ ಹಾಲಿ ಶಾಸಕ ಎಂಬುದನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ನ್ಯಾಯಾಲಯಕ್ಕೆ
ಮನವಿ ಮಾಡಿದ್ದರು. ಆದರೆ, ಸಿಬಿಐ ವಿಶೇಷ ಕೋರ್ಟ್ ಮನವಿಯನ್ನು ತಿರಸ್ಕರಿಸಿದೆ. ಜನಾರ್ದನ ರೆಡ್ಡಿ ಎಸಗಿರುವ ಅಪರಾಧವು ಜೀವಾವಧಿ ಶಿಕ್ಷೆಗೆ ಯೋಗ್ಯವಾದದ್ದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದರಿಂದ ಜನಾರ್ದನ ರೆಡ್ಡಿ ಮತ್ತೆ ಜೈಲು ಸೇರಬೇಕಾಗುತ್ತದೆ.
ಜನಾರ್ದನ ರೆಡ್ಡಿಯವರು ತಿರುಪತಿ ತಿಮ್ಮಪ್ಪನಿಗೆ 45
ಕೋಟಿ ರೂ.ಗಳ ವಜ್ರದ ಕಿರೀಟ ಅರ್ಪಿಸಿರುವುದನ್ನು ಸ್ಮರಿಸಬಹುದು. ಅಪರಾಧ ಎಸಗಿ ಯಾವುದೇ ದೇವರಿಗೆ ಮೊರೆ ಹೋದರೂ ಪ್ರಯೋಜನವಿಲ್ಲ, ಮಾಡಿದ ಕರ್ಮವನ್ನು ಅನುಭವಿಸಲೇ ಬೇಕೆನ್ನುವುದು ತೀರ್ಪಿನಿಂದ ಮತ್ತೊಮ್ಮೆ ಸಾಬೀತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು