4:32 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಕ್ರಮ ಗಣಿಗಾರಿಕೆ: ತಿರುಪತಿ ತಿಮ್ಮಪ್ಪನಿಗೆ 45 ಕೋಟಿ ರೂ.ಗಳ ಕಿರೀಟ ಸಮರ್ಪಿಸಿದ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

06/05/2025, 21:30

ಹೈದರಾಬಾದ್(reporterkarnataka.com): ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ
884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಗಂಗಾವತಿ ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
13 ವರ್ಷಗಳ ದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಐಪಿಸಿ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆ.13(2) ಜೊತೆಗೆ 13(1)(d) ಅಡಿ ಜನಾರ್ದನ ರೆಡ್ಡಿ ಮೇಲಿನ
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ.
ಜನಾರ್ದನ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆ ಹಾಗೂ ಹಾಲಿ ಶಾಸಕ ಎಂಬುದನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ನ್ಯಾಯಾಲಯಕ್ಕೆ
ಮನವಿ ಮಾಡಿದ್ದರು. ಆದರೆ, ಸಿಬಿಐ ವಿಶೇಷ ಕೋರ್ಟ್ ಮನವಿಯನ್ನು ತಿರಸ್ಕರಿಸಿದೆ. ಜನಾರ್ದನ ರೆಡ್ಡಿ ಎಸಗಿರುವ ಅಪರಾಧವು ಜೀವಾವಧಿ ಶಿಕ್ಷೆಗೆ ಯೋಗ್ಯವಾದದ್ದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದರಿಂದ ಜನಾರ್ದನ ರೆಡ್ಡಿ ಮತ್ತೆ ಜೈಲು ಸೇರಬೇಕಾಗುತ್ತದೆ.
ಜನಾರ್ದನ ರೆಡ್ಡಿಯವರು ತಿರುಪತಿ ತಿಮ್ಮಪ್ಪನಿಗೆ 45
ಕೋಟಿ ರೂ.ಗಳ ವಜ್ರದ ಕಿರೀಟ ಅರ್ಪಿಸಿರುವುದನ್ನು ಸ್ಮರಿಸಬಹುದು. ಅಪರಾಧ ಎಸಗಿ ಯಾವುದೇ ದೇವರಿಗೆ ಮೊರೆ ಹೋದರೂ ಪ್ರಯೋಜನವಿಲ್ಲ, ಮಾಡಿದ ಕರ್ಮವನ್ನು ಅನುಭವಿಸಲೇ ಬೇಕೆನ್ನುವುದು ತೀರ್ಪಿನಿಂದ ಮತ್ತೊಮ್ಮೆ ಸಾಬೀತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು