2:01 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಕ್ರಮ ಗಣಿಗಾರಿಕೆ: ತಿರುಪತಿ ತಿಮ್ಮಪ್ಪನಿಗೆ 45 ಕೋಟಿ ರೂ.ಗಳ ಕಿರೀಟ ಸಮರ್ಪಿಸಿದ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

06/05/2025, 21:30

ಹೈದರಾಬಾದ್(reporterkarnataka.com): ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ
884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಗಂಗಾವತಿ ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
13 ವರ್ಷಗಳ ದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಐಪಿಸಿ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆ.13(2) ಜೊತೆಗೆ 13(1)(d) ಅಡಿ ಜನಾರ್ದನ ರೆಡ್ಡಿ ಮೇಲಿನ
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ.
ಜನಾರ್ದನ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆ ಹಾಗೂ ಹಾಲಿ ಶಾಸಕ ಎಂಬುದನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ನ್ಯಾಯಾಲಯಕ್ಕೆ
ಮನವಿ ಮಾಡಿದ್ದರು. ಆದರೆ, ಸಿಬಿಐ ವಿಶೇಷ ಕೋರ್ಟ್ ಮನವಿಯನ್ನು ತಿರಸ್ಕರಿಸಿದೆ. ಜನಾರ್ದನ ರೆಡ್ಡಿ ಎಸಗಿರುವ ಅಪರಾಧವು ಜೀವಾವಧಿ ಶಿಕ್ಷೆಗೆ ಯೋಗ್ಯವಾದದ್ದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದರಿಂದ ಜನಾರ್ದನ ರೆಡ್ಡಿ ಮತ್ತೆ ಜೈಲು ಸೇರಬೇಕಾಗುತ್ತದೆ.
ಜನಾರ್ದನ ರೆಡ್ಡಿಯವರು ತಿರುಪತಿ ತಿಮ್ಮಪ್ಪನಿಗೆ 45
ಕೋಟಿ ರೂ.ಗಳ ವಜ್ರದ ಕಿರೀಟ ಅರ್ಪಿಸಿರುವುದನ್ನು ಸ್ಮರಿಸಬಹುದು. ಅಪರಾಧ ಎಸಗಿ ಯಾವುದೇ ದೇವರಿಗೆ ಮೊರೆ ಹೋದರೂ ಪ್ರಯೋಜನವಿಲ್ಲ, ಮಾಡಿದ ಕರ್ಮವನ್ನು ಅನುಭವಿಸಲೇ ಬೇಕೆನ್ನುವುದು ತೀರ್ಪಿನಿಂದ ಮತ್ತೊಮ್ಮೆ ಸಾಬೀತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು