5:13 PM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ದೈವ ಅನುಕರಣೆ ಪ್ರಕರಣ | ಹೊಸದಾಗಿ ಕ್ಷಮಾಪಣೆ ಕೇಳಲು ಸಿದ್ಧ: ಬಾಲಿವುಡ್ ನಟ ರಣವೀರ್ ಸಿಂಗ್

10/04/2026, 21:06

ಬೆಂಗಳೂರು(reporterkarnataka.com): ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್​​​ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಕ್ಷಮೆ ಕೇಳಲು ಸಿದ್ಧ ಎಂದಿರುವ ರಣವೀರ್, ದೇವಾಲಯಕ್ಕೂ ಭೇಟಿ ನೀಡುವುದಾಗಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಚಾವುಂಡಿ ದೈವ ಅನುಕರಿಸಿದ ಪ್ರಕರಣದಲ್ಲಿ ಪರಿಷ್ಕೃತ ಕ್ಷಮೆಯಾಚನಾ ಅಫಿಡವಿಟ್​ ಸಲ್ಲಿಸಲು ನಾನು ಸಿದ್ಧ. ಈ ಹಿಂದಿನ ಕ್ಷಮೆಯಾಚನೆ ಪ್ರಾಮಾಣಿಕವಾಗಿಲ್ಲ ಎಂಬ ಕಳವಳವನ್ನು ಇದು ದೂರ ಮಾಡುತ್ತದೆ’ ಎಂದು ರಣವೀರ್ ಸಿಂಗ್ ಪರವಾಗಿ ಸಜನ್ ಪೂವಯ್ಯ ಕೋರ್ಟ್​​ಗೆ ತಿಳಿಸಿದ್ದಾಗಿ ಬಾರ್ ಆ್ಯಂಡ್ ಬೇಂಚ್ ವರದಿ ಮಾಡಿದೆ. ನಾನು ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದೇನೆ ಮತ್ತು ಆ ಅಫಿಡವಿಟ್‌ನಲ್ಲಿ ದೇವಸ್ಥಾನಕ್ಕೂ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದೇನೆ. ದೈವಾರಾಧಕರನ್ನು ನೋಯಿಸಿದ್ದೇನೆ ಎಂದು ಮಿಮಿಕ್ರಿ ಮಾಡಿದಾಗ ನನಗೆ ತಿಳಿದಿರಲಿಲ್ಲ. ನಾನು ಮುಂಬೈನ ಸಿಂಧಿ ಕುಟುಂಬದಲ್ಲಿ ಬೆಳೆದವನು. ನನಗೆ ಈ ಸೂಕ್ಷ್ಮತೆಗಳ ಬಗ್ಗೆ ತಿಳಿದಿರಲಿಲ್ಲ’ ಎಂದು ರಣವೀರ್ ಸಿಂಗ್ ಕೋರ್ಟ್​​ಗೇ ಈ ಮೊದಲು ವಕೀಲರ ಮೂಲಕ ತಿಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು