5:53 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ

ಇತ್ತೀಚಿನ ಸುದ್ದಿ

ದೈವ ಅನುಕರಣೆ ಪ್ರಕರಣ | ಹೊಸದಾಗಿ ಕ್ಷಮಾಪಣೆ ಕೇಳಲು ಸಿದ್ಧ: ಬಾಲಿವುಡ್ ನಟ ರಣವೀರ್ ಸಿಂಗ್

10/04/2026, 21:06

ಬೆಂಗಳೂರು(reporterkarnataka.com): ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್​​​ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಕ್ಷಮೆ ಕೇಳಲು ಸಿದ್ಧ ಎಂದಿರುವ ರಣವೀರ್, ದೇವಾಲಯಕ್ಕೂ ಭೇಟಿ ನೀಡುವುದಾಗಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಚಾವುಂಡಿ ದೈವ ಅನುಕರಿಸಿದ ಪ್ರಕರಣದಲ್ಲಿ ಪರಿಷ್ಕೃತ ಕ್ಷಮೆಯಾಚನಾ ಅಫಿಡವಿಟ್​ ಸಲ್ಲಿಸಲು ನಾನು ಸಿದ್ಧ. ಈ ಹಿಂದಿನ ಕ್ಷಮೆಯಾಚನೆ ಪ್ರಾಮಾಣಿಕವಾಗಿಲ್ಲ ಎಂಬ ಕಳವಳವನ್ನು ಇದು ದೂರ ಮಾಡುತ್ತದೆ’ ಎಂದು ರಣವೀರ್ ಸಿಂಗ್ ಪರವಾಗಿ ಸಜನ್ ಪೂವಯ್ಯ ಕೋರ್ಟ್​​ಗೆ ತಿಳಿಸಿದ್ದಾಗಿ ಬಾರ್ ಆ್ಯಂಡ್ ಬೇಂಚ್ ವರದಿ ಮಾಡಿದೆ. ನಾನು ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದೇನೆ ಮತ್ತು ಆ ಅಫಿಡವಿಟ್‌ನಲ್ಲಿ ದೇವಸ್ಥಾನಕ್ಕೂ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದೇನೆ. ದೈವಾರಾಧಕರನ್ನು ನೋಯಿಸಿದ್ದೇನೆ ಎಂದು ಮಿಮಿಕ್ರಿ ಮಾಡಿದಾಗ ನನಗೆ ತಿಳಿದಿರಲಿಲ್ಲ. ನಾನು ಮುಂಬೈನ ಸಿಂಧಿ ಕುಟುಂಬದಲ್ಲಿ ಬೆಳೆದವನು. ನನಗೆ ಈ ಸೂಕ್ಷ್ಮತೆಗಳ ಬಗ್ಗೆ ತಿಳಿದಿರಲಿಲ್ಲ’ ಎಂದು ರಣವೀರ್ ಸಿಂಗ್ ಕೋರ್ಟ್​​ಗೇ ಈ ಮೊದಲು ವಕೀಲರ ಮೂಲಕ ತಿಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು