3:23 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ದೈವ ಅನುಕರಣೆ ಪ್ರಕರಣ | ಹೊಸದಾಗಿ ಕ್ಷಮಾಪಣೆ ಕೇಳಲು ಸಿದ್ಧ: ಬಾಲಿವುಡ್ ನಟ ರಣವೀರ್ ಸಿಂಗ್

10/04/2026, 21:06

ಬೆಂಗಳೂರು(reporterkarnataka.com): ಚಾವುಂಡಿ ದೈವ ಅನುಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ಅವರು ಕೇಸ್ ಎದುರಿಸುತ್ತಿದ್ದಾರೆ. ಈ ಪ್ರಕರಣ ಕರ್ನಾಟಕ ಹೈಕೋರ್ಟ್​​​ನಲ್ಲಿದೆ. ಇಂದು (ಏಪ್ರಿಲ್ 10) ನಡೆದ ವಿಚಾರಣೆಯಲ್ಲಿ ರಣವೀರ್ ಸಿಂಗ್ ಪರವಾಗಿ ವಕೀಲರು ಹೊಸ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಕ್ಷಮೆ ಕೇಳಲು ಸಿದ್ಧ ಎಂದಿರುವ ರಣವೀರ್, ದೇವಾಲಯಕ್ಕೂ ಭೇಟಿ ನೀಡುವುದಾಗಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಚಾವುಂಡಿ ದೈವ ಅನುಕರಿಸಿದ ಪ್ರಕರಣದಲ್ಲಿ ಪರಿಷ್ಕೃತ ಕ್ಷಮೆಯಾಚನಾ ಅಫಿಡವಿಟ್​ ಸಲ್ಲಿಸಲು ನಾನು ಸಿದ್ಧ. ಈ ಹಿಂದಿನ ಕ್ಷಮೆಯಾಚನೆ ಪ್ರಾಮಾಣಿಕವಾಗಿಲ್ಲ ಎಂಬ ಕಳವಳವನ್ನು ಇದು ದೂರ ಮಾಡುತ್ತದೆ’ ಎಂದು ರಣವೀರ್ ಸಿಂಗ್ ಪರವಾಗಿ ಸಜನ್ ಪೂವಯ್ಯ ಕೋರ್ಟ್​​ಗೆ ತಿಳಿಸಿದ್ದಾಗಿ ಬಾರ್ ಆ್ಯಂಡ್ ಬೇಂಚ್ ವರದಿ ಮಾಡಿದೆ. ನಾನು ಕ್ಷಮೆಯಾಚನೆಯ ಅಫಿಡವಿಟ್ ಸಲ್ಲಿಸಿದ್ದೇನೆ ಮತ್ತು ಆ ಅಫಿಡವಿಟ್‌ನಲ್ಲಿ ದೇವಸ್ಥಾನಕ್ಕೂ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದೇನೆ. ದೈವಾರಾಧಕರನ್ನು ನೋಯಿಸಿದ್ದೇನೆ ಎಂದು ಮಿಮಿಕ್ರಿ ಮಾಡಿದಾಗ ನನಗೆ ತಿಳಿದಿರಲಿಲ್ಲ. ನಾನು ಮುಂಬೈನ ಸಿಂಧಿ ಕುಟುಂಬದಲ್ಲಿ ಬೆಳೆದವನು. ನನಗೆ ಈ ಸೂಕ್ಷ್ಮತೆಗಳ ಬಗ್ಗೆ ತಿಳಿದಿರಲಿಲ್ಲ’ ಎಂದು ರಣವೀರ್ ಸಿಂಗ್ ಕೋರ್ಟ್​​ಗೇ ಈ ಮೊದಲು ವಕೀಲರ ಮೂಲಕ ತಿಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು