1:34 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಅವಘಡ, ವಿಪತ್ತು ತಡೆಗೆ ಏಕೀಕೃತ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

20/03/2025, 20:24

ಮಂಗಳೂರು(reporterkarnataka.com): ಕೈಗಾರಿಕೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಅವಘಡ ಮತ್ತು ವಿಪತ್ತುಗಳಿಂದ ರಕ್ಷಿಸಲು ಏಕೀಕೃತ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಕರೆ ನೀಡಿದ್ದಾರೆ.
ಅವರು ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ 54ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ರಿಸ್ಕ್ ಕೈಗಾರಿಕೆಗಳು ಸೇರಿದಂತೆ ವಿವಿಧ ರೀತಿಯ ಉದ್ಯಮಗಳು ಇವೆ. ಇವು ತಮ್ಮ ಸುರಕ್ಷತಾ ವ್ಯವಸ್ಥೆಯನ್ನು ಆಗಿಂದ್ದಾಗೆ ಪರಿಶೀಲಿಸುತ್ತಿರಬೇಕು. ಯಾವುದೇ ಅನಾಹುತಗಳಾದರೆ ಅವುಗಳ ಪರಿಣಾಮ ಇತರೆ ಪ್ರದೇಶಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳ ಸುರಕ್ಷತೆಗೆ ಎಲ್ಲಾ ಭಾಗೀದಾರಿ ಇಲಾಖೆಗಳು ಹಾಗೂ ಸುರಕ್ಷತಾ ಏಜೆನ್ಸಿಗಳು ಏಕೀಕೃತವಾದ ಸುರಕ್ಷತಾ ವ್ಯವಸ್ಥೆಯನ್ನು ಹೊಂದಬೇಕು. ಇದರಿಂದ ಯಾವುದೇ ಅನಾಹುತಗಳ ಸಂದರ್ಭದಲ್ಲಿ ಜೀವ ಹಾನಿ ಮತ್ತು ನಷ್ಟದ ಪ್ರಮಾಣವನ್ನು ತಗ್ಗಿಸಬಹುದಾಗಿದೆ ಎಂದು ಅವರು ಹೇಳಿದರು.
ನಾಗರೀಕರು ತಮ್ಮ ದೈನಂದಿನ ಬದುಕಿನಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಆಗಿಂದ್ದಾಗೆ ಪರಿಶೀಲಿಸಬೇಕು. ಯಾವುದೇ ಅನಾಹುತಗಳಿಂದ ಮಾನಸಿಕ ಸ್ಥಿರತೆ ಮೇಲೂ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸುರಕ್ಷತಾ ವ್ಯವಸ್ಥೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಜಂಟಿ ನಿರ್ದೇಶಕ ನರೇಂದ್ರಬಾಬು , ಎಂ.ಆರ್.ಪಿ.ಎಲ್ ರಿಫೈನರಿ ನಿರ್ದೇಶಕ ನಂದಕುಮಾರ್ ಪಿಲ್ಲೈ, ರಾಷ್ಟ್ರೀಯ ಸುರಕ್ಷತಾ ಕೌನ್ಸಿಲ್ ಮಂಗಳೂರು ಘಟಕದ ಸಮನ್ವಯಕಾರ ಪಿ.ಎಫ್ ಮರಿಯಣ್ಣನವರ್ ಉಪಸ್ಥಿತರಿದ್ದರು.
ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪ ನಿರ್ದೇಶಕ ಎಂ.ಎಸ್ ಮಹಾದೇವ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು