8:42 PM Tuesday4 - August 2026
ಬ್ರೇಕಿಂಗ್ ನ್ಯೂಸ್
*ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157…

ಇತ್ತೀಚಿನ ಸುದ್ದಿ

ಅವಘಡ, ವಿಪತ್ತು ತಡೆಗೆ ಏಕೀಕೃತ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

20/03/2025, 20:24

ಮಂಗಳೂರು(reporterkarnataka.com): ಕೈಗಾರಿಕೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಅವಘಡ ಮತ್ತು ವಿಪತ್ತುಗಳಿಂದ ರಕ್ಷಿಸಲು ಏಕೀಕೃತ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಕರೆ ನೀಡಿದ್ದಾರೆ.
ಅವರು ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ 54ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ರಿಸ್ಕ್ ಕೈಗಾರಿಕೆಗಳು ಸೇರಿದಂತೆ ವಿವಿಧ ರೀತಿಯ ಉದ್ಯಮಗಳು ಇವೆ. ಇವು ತಮ್ಮ ಸುರಕ್ಷತಾ ವ್ಯವಸ್ಥೆಯನ್ನು ಆಗಿಂದ್ದಾಗೆ ಪರಿಶೀಲಿಸುತ್ತಿರಬೇಕು. ಯಾವುದೇ ಅನಾಹುತಗಳಾದರೆ ಅವುಗಳ ಪರಿಣಾಮ ಇತರೆ ಪ್ರದೇಶಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳ ಸುರಕ್ಷತೆಗೆ ಎಲ್ಲಾ ಭಾಗೀದಾರಿ ಇಲಾಖೆಗಳು ಹಾಗೂ ಸುರಕ್ಷತಾ ಏಜೆನ್ಸಿಗಳು ಏಕೀಕೃತವಾದ ಸುರಕ್ಷತಾ ವ್ಯವಸ್ಥೆಯನ್ನು ಹೊಂದಬೇಕು. ಇದರಿಂದ ಯಾವುದೇ ಅನಾಹುತಗಳ ಸಂದರ್ಭದಲ್ಲಿ ಜೀವ ಹಾನಿ ಮತ್ತು ನಷ್ಟದ ಪ್ರಮಾಣವನ್ನು ತಗ್ಗಿಸಬಹುದಾಗಿದೆ ಎಂದು ಅವರು ಹೇಳಿದರು.
ನಾಗರೀಕರು ತಮ್ಮ ದೈನಂದಿನ ಬದುಕಿನಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಆಗಿಂದ್ದಾಗೆ ಪರಿಶೀಲಿಸಬೇಕು. ಯಾವುದೇ ಅನಾಹುತಗಳಿಂದ ಮಾನಸಿಕ ಸ್ಥಿರತೆ ಮೇಲೂ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸುರಕ್ಷತಾ ವ್ಯವಸ್ಥೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಜಂಟಿ ನಿರ್ದೇಶಕ ನರೇಂದ್ರಬಾಬು , ಎಂ.ಆರ್.ಪಿ.ಎಲ್ ರಿಫೈನರಿ ನಿರ್ದೇಶಕ ನಂದಕುಮಾರ್ ಪಿಲ್ಲೈ, ರಾಷ್ಟ್ರೀಯ ಸುರಕ್ಷತಾ ಕೌನ್ಸಿಲ್ ಮಂಗಳೂರು ಘಟಕದ ಸಮನ್ವಯಕಾರ ಪಿ.ಎಫ್ ಮರಿಯಣ್ಣನವರ್ ಉಪಸ್ಥಿತರಿದ್ದರು.
ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪ ನಿರ್ದೇಶಕ ಎಂ.ಎಸ್ ಮಹಾದೇವ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು