4:51 AM Tuesday19 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ಅವಘಡ, ವಿಪತ್ತು ತಡೆಗೆ ಏಕೀಕೃತ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

20/03/2025, 20:24

ಮಂಗಳೂರು(reporterkarnataka.com): ಕೈಗಾರಿಕೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಅವಘಡ ಮತ್ತು ವಿಪತ್ತುಗಳಿಂದ ರಕ್ಷಿಸಲು ಏಕೀಕೃತ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಕರೆ ನೀಡಿದ್ದಾರೆ.
ಅವರು ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ 54ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ರಿಸ್ಕ್ ಕೈಗಾರಿಕೆಗಳು ಸೇರಿದಂತೆ ವಿವಿಧ ರೀತಿಯ ಉದ್ಯಮಗಳು ಇವೆ. ಇವು ತಮ್ಮ ಸುರಕ್ಷತಾ ವ್ಯವಸ್ಥೆಯನ್ನು ಆಗಿಂದ್ದಾಗೆ ಪರಿಶೀಲಿಸುತ್ತಿರಬೇಕು. ಯಾವುದೇ ಅನಾಹುತಗಳಾದರೆ ಅವುಗಳ ಪರಿಣಾಮ ಇತರೆ ಪ್ರದೇಶಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳ ಸುರಕ್ಷತೆಗೆ ಎಲ್ಲಾ ಭಾಗೀದಾರಿ ಇಲಾಖೆಗಳು ಹಾಗೂ ಸುರಕ್ಷತಾ ಏಜೆನ್ಸಿಗಳು ಏಕೀಕೃತವಾದ ಸುರಕ್ಷತಾ ವ್ಯವಸ್ಥೆಯನ್ನು ಹೊಂದಬೇಕು. ಇದರಿಂದ ಯಾವುದೇ ಅನಾಹುತಗಳ ಸಂದರ್ಭದಲ್ಲಿ ಜೀವ ಹಾನಿ ಮತ್ತು ನಷ್ಟದ ಪ್ರಮಾಣವನ್ನು ತಗ್ಗಿಸಬಹುದಾಗಿದೆ ಎಂದು ಅವರು ಹೇಳಿದರು.
ನಾಗರೀಕರು ತಮ್ಮ ದೈನಂದಿನ ಬದುಕಿನಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಆಗಿಂದ್ದಾಗೆ ಪರಿಶೀಲಿಸಬೇಕು. ಯಾವುದೇ ಅನಾಹುತಗಳಿಂದ ಮಾನಸಿಕ ಸ್ಥಿರತೆ ಮೇಲೂ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸುರಕ್ಷತಾ ವ್ಯವಸ್ಥೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಜಂಟಿ ನಿರ್ದೇಶಕ ನರೇಂದ್ರಬಾಬು , ಎಂ.ಆರ್.ಪಿ.ಎಲ್ ರಿಫೈನರಿ ನಿರ್ದೇಶಕ ನಂದಕುಮಾರ್ ಪಿಲ್ಲೈ, ರಾಷ್ಟ್ರೀಯ ಸುರಕ್ಷತಾ ಕೌನ್ಸಿಲ್ ಮಂಗಳೂರು ಘಟಕದ ಸಮನ್ವಯಕಾರ ಪಿ.ಎಫ್ ಮರಿಯಣ್ಣನವರ್ ಉಪಸ್ಥಿತರಿದ್ದರು.
ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪ ನಿರ್ದೇಶಕ ಎಂ.ಎಸ್ ಮಹಾದೇವ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು