8:48 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅವಘಡ, ವಿಪತ್ತು ತಡೆಗೆ ಏಕೀಕೃತ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

20/03/2025, 20:24

ಮಂಗಳೂರು(reporterkarnataka.com): ಕೈಗಾರಿಕೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಅವಘಡ ಮತ್ತು ವಿಪತ್ತುಗಳಿಂದ ರಕ್ಷಿಸಲು ಏಕೀಕೃತ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಕರೆ ನೀಡಿದ್ದಾರೆ.
ಅವರು ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ 54ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ರಿಸ್ಕ್ ಕೈಗಾರಿಕೆಗಳು ಸೇರಿದಂತೆ ವಿವಿಧ ರೀತಿಯ ಉದ್ಯಮಗಳು ಇವೆ. ಇವು ತಮ್ಮ ಸುರಕ್ಷತಾ ವ್ಯವಸ್ಥೆಯನ್ನು ಆಗಿಂದ್ದಾಗೆ ಪರಿಶೀಲಿಸುತ್ತಿರಬೇಕು. ಯಾವುದೇ ಅನಾಹುತಗಳಾದರೆ ಅವುಗಳ ಪರಿಣಾಮ ಇತರೆ ಪ್ರದೇಶಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳ ಸುರಕ್ಷತೆಗೆ ಎಲ್ಲಾ ಭಾಗೀದಾರಿ ಇಲಾಖೆಗಳು ಹಾಗೂ ಸುರಕ್ಷತಾ ಏಜೆನ್ಸಿಗಳು ಏಕೀಕೃತವಾದ ಸುರಕ್ಷತಾ ವ್ಯವಸ್ಥೆಯನ್ನು ಹೊಂದಬೇಕು. ಇದರಿಂದ ಯಾವುದೇ ಅನಾಹುತಗಳ ಸಂದರ್ಭದಲ್ಲಿ ಜೀವ ಹಾನಿ ಮತ್ತು ನಷ್ಟದ ಪ್ರಮಾಣವನ್ನು ತಗ್ಗಿಸಬಹುದಾಗಿದೆ ಎಂದು ಅವರು ಹೇಳಿದರು.
ನಾಗರೀಕರು ತಮ್ಮ ದೈನಂದಿನ ಬದುಕಿನಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಆಗಿಂದ್ದಾಗೆ ಪರಿಶೀಲಿಸಬೇಕು. ಯಾವುದೇ ಅನಾಹುತಗಳಿಂದ ಮಾನಸಿಕ ಸ್ಥಿರತೆ ಮೇಲೂ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸುರಕ್ಷತಾ ವ್ಯವಸ್ಥೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಜಂಟಿ ನಿರ್ದೇಶಕ ನರೇಂದ್ರಬಾಬು , ಎಂ.ಆರ್.ಪಿ.ಎಲ್ ರಿಫೈನರಿ ನಿರ್ದೇಶಕ ನಂದಕುಮಾರ್ ಪಿಲ್ಲೈ, ರಾಷ್ಟ್ರೀಯ ಸುರಕ್ಷತಾ ಕೌನ್ಸಿಲ್ ಮಂಗಳೂರು ಘಟಕದ ಸಮನ್ವಯಕಾರ ಪಿ.ಎಫ್ ಮರಿಯಣ್ಣನವರ್ ಉಪಸ್ಥಿತರಿದ್ದರು.
ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪ ನಿರ್ದೇಶಕ ಎಂ.ಎಸ್ ಮಹಾದೇವ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು