1:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅವಘಡ, ವಿಪತ್ತು ತಡೆಗೆ ಏಕೀಕೃತ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

20/03/2025, 20:24

ಮಂಗಳೂರು(reporterkarnataka.com): ಕೈಗಾರಿಕೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಅವಘಡ ಮತ್ತು ವಿಪತ್ತುಗಳಿಂದ ರಕ್ಷಿಸಲು ಏಕೀಕೃತ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಕರೆ ನೀಡಿದ್ದಾರೆ.
ಅವರು ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ 54ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ರಿಸ್ಕ್ ಕೈಗಾರಿಕೆಗಳು ಸೇರಿದಂತೆ ವಿವಿಧ ರೀತಿಯ ಉದ್ಯಮಗಳು ಇವೆ. ಇವು ತಮ್ಮ ಸುರಕ್ಷತಾ ವ್ಯವಸ್ಥೆಯನ್ನು ಆಗಿಂದ್ದಾಗೆ ಪರಿಶೀಲಿಸುತ್ತಿರಬೇಕು. ಯಾವುದೇ ಅನಾಹುತಗಳಾದರೆ ಅವುಗಳ ಪರಿಣಾಮ ಇತರೆ ಪ್ರದೇಶಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ಕೈಗಾರಿಕೆಗಳು ಮತ್ತು ಜನವಸತಿ ಪ್ರದೇಶಗಳ ಸುರಕ್ಷತೆಗೆ ಎಲ್ಲಾ ಭಾಗೀದಾರಿ ಇಲಾಖೆಗಳು ಹಾಗೂ ಸುರಕ್ಷತಾ ಏಜೆನ್ಸಿಗಳು ಏಕೀಕೃತವಾದ ಸುರಕ್ಷತಾ ವ್ಯವಸ್ಥೆಯನ್ನು ಹೊಂದಬೇಕು. ಇದರಿಂದ ಯಾವುದೇ ಅನಾಹುತಗಳ ಸಂದರ್ಭದಲ್ಲಿ ಜೀವ ಹಾನಿ ಮತ್ತು ನಷ್ಟದ ಪ್ರಮಾಣವನ್ನು ತಗ್ಗಿಸಬಹುದಾಗಿದೆ ಎಂದು ಅವರು ಹೇಳಿದರು.
ನಾಗರೀಕರು ತಮ್ಮ ದೈನಂದಿನ ಬದುಕಿನಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಆಗಿಂದ್ದಾಗೆ ಪರಿಶೀಲಿಸಬೇಕು. ಯಾವುದೇ ಅನಾಹುತಗಳಿಂದ ಮಾನಸಿಕ ಸ್ಥಿರತೆ ಮೇಲೂ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸುರಕ್ಷತಾ ವ್ಯವಸ್ಥೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಜಂಟಿ ನಿರ್ದೇಶಕ ನರೇಂದ್ರಬಾಬು , ಎಂ.ಆರ್.ಪಿ.ಎಲ್ ರಿಫೈನರಿ ನಿರ್ದೇಶಕ ನಂದಕುಮಾರ್ ಪಿಲ್ಲೈ, ರಾಷ್ಟ್ರೀಯ ಸುರಕ್ಷತಾ ಕೌನ್ಸಿಲ್ ಮಂಗಳೂರು ಘಟಕದ ಸಮನ್ವಯಕಾರ ಪಿ.ಎಫ್ ಮರಿಯಣ್ಣನವರ್ ಉಪಸ್ಥಿತರಿದ್ದರು.
ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆ ಉಪ ನಿರ್ದೇಶಕ ಎಂ.ಎಸ್ ಮಹಾದೇವ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು