12:15 AM Tuesday17 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ…

ಇತ್ತೀಚಿನ ಸುದ್ದಿ

ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿ ಅನುಷ್ಠಾನಗೊಳಿಸಿ: ವಿಧಾನ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಒತ್ತಾಯ

13/03/2025, 11:09

ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.


ಈ ಬಗ್ಗೆ ಹಿಂದಿನ ಮೂರು ಅಧಿವೇಶನದಿಂದಲೂ ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಮತ್ತು ಸಾರಿಗೆ ಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಸುಮಾರು 10 ಸಾವಿರದಷ್ಟು ಇರುವ ರಿಕ್ಷಾ ಚಾಲಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕನಿಷ್ಠ ಈ ಅಧಿವೇಶದಲ್ಲಾದರೂ ಎಲ್ಲಾ ರಿಕ್ಷಾ ಚಾಲಕರುಗಳು ಬಯಸುತ್ತಿರುವ ತಮಿಳುನಾಡು ಮಾದರಿಯ ಪರಿಹಾರ ಮಾರ್ಗವನ್ನು ಅನುಷ್ಠಾನಗೊಳಿಸಿದರೆ ರಿಕ್ಷಾ ಚಾಲಕ ಬಂಧುಗಳ ನಡುವಿನ ಗೊಂದಲ-ಘರ್ಷಣೆ ಕಡಿಮೆಯಾಗುತ್ತದೆ ಎಂದು ಶಾಸಕರು ಹೇಳಿದರು.
ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಶಾಸಕ ಕಾಮತ್ ರವರ ಸಲಹೆಗೆ ನನ್ನ ಸಹಮತವಿದ್ದು ಖಂಡಿತವಾಗಿಯೂ ಈ ಬಗ್ಗೆ ಅತೀ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು