6:28 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿ ಅನುಷ್ಠಾನಗೊಳಿಸಿ: ವಿಧಾನ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಒತ್ತಾಯ

13/03/2025, 11:09

ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.


ಈ ಬಗ್ಗೆ ಹಿಂದಿನ ಮೂರು ಅಧಿವೇಶನದಿಂದಲೂ ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಮತ್ತು ಸಾರಿಗೆ ಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಸುಮಾರು 10 ಸಾವಿರದಷ್ಟು ಇರುವ ರಿಕ್ಷಾ ಚಾಲಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕನಿಷ್ಠ ಈ ಅಧಿವೇಶದಲ್ಲಾದರೂ ಎಲ್ಲಾ ರಿಕ್ಷಾ ಚಾಲಕರುಗಳು ಬಯಸುತ್ತಿರುವ ತಮಿಳುನಾಡು ಮಾದರಿಯ ಪರಿಹಾರ ಮಾರ್ಗವನ್ನು ಅನುಷ್ಠಾನಗೊಳಿಸಿದರೆ ರಿಕ್ಷಾ ಚಾಲಕ ಬಂಧುಗಳ ನಡುವಿನ ಗೊಂದಲ-ಘರ್ಷಣೆ ಕಡಿಮೆಯಾಗುತ್ತದೆ ಎಂದು ಶಾಸಕರು ಹೇಳಿದರು.
ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಶಾಸಕ ಕಾಮತ್ ರವರ ಸಲಹೆಗೆ ನನ್ನ ಸಹಮತವಿದ್ದು ಖಂಡಿತವಾಗಿಯೂ ಈ ಬಗ್ಗೆ ಅತೀ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು