3:58 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿ ಅನುಷ್ಠಾನಗೊಳಿಸಿ: ವಿಧಾನ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಒತ್ತಾಯ

13/03/2025, 11:09

ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.


ಈ ಬಗ್ಗೆ ಹಿಂದಿನ ಮೂರು ಅಧಿವೇಶನದಿಂದಲೂ ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಮತ್ತು ಸಾರಿಗೆ ಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಸುಮಾರು 10 ಸಾವಿರದಷ್ಟು ಇರುವ ರಿಕ್ಷಾ ಚಾಲಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕನಿಷ್ಠ ಈ ಅಧಿವೇಶದಲ್ಲಾದರೂ ಎಲ್ಲಾ ರಿಕ್ಷಾ ಚಾಲಕರುಗಳು ಬಯಸುತ್ತಿರುವ ತಮಿಳುನಾಡು ಮಾದರಿಯ ಪರಿಹಾರ ಮಾರ್ಗವನ್ನು ಅನುಷ್ಠಾನಗೊಳಿಸಿದರೆ ರಿಕ್ಷಾ ಚಾಲಕ ಬಂಧುಗಳ ನಡುವಿನ ಗೊಂದಲ-ಘರ್ಷಣೆ ಕಡಿಮೆಯಾಗುತ್ತದೆ ಎಂದು ಶಾಸಕರು ಹೇಳಿದರು.
ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಶಾಸಕ ಕಾಮತ್ ರವರ ಸಲಹೆಗೆ ನನ್ನ ಸಹಮತವಿದ್ದು ಖಂಡಿತವಾಗಿಯೂ ಈ ಬಗ್ಗೆ ಅತೀ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು