12:25 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿ ಅನುಷ್ಠಾನಗೊಳಿಸಿ: ವಿಧಾನ ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಒತ್ತಾಯ

13/03/2025, 11:09

ಬೆಂಗಳೂರು(reporterkarnataka.com): ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.


ಈ ಬಗ್ಗೆ ಹಿಂದಿನ ಮೂರು ಅಧಿವೇಶನದಿಂದಲೂ ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಮತ್ತು ಸಾರಿಗೆ ಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಸುಮಾರು 10 ಸಾವಿರದಷ್ಟು ಇರುವ ರಿಕ್ಷಾ ಚಾಲಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕನಿಷ್ಠ ಈ ಅಧಿವೇಶದಲ್ಲಾದರೂ ಎಲ್ಲಾ ರಿಕ್ಷಾ ಚಾಲಕರುಗಳು ಬಯಸುತ್ತಿರುವ ತಮಿಳುನಾಡು ಮಾದರಿಯ ಪರಿಹಾರ ಮಾರ್ಗವನ್ನು ಅನುಷ್ಠಾನಗೊಳಿಸಿದರೆ ರಿಕ್ಷಾ ಚಾಲಕ ಬಂಧುಗಳ ನಡುವಿನ ಗೊಂದಲ-ಘರ್ಷಣೆ ಕಡಿಮೆಯಾಗುತ್ತದೆ ಎಂದು ಶಾಸಕರು ಹೇಳಿದರು.
ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಶಾಸಕ ಕಾಮತ್ ರವರ ಸಲಹೆಗೆ ನನ್ನ ಸಹಮತವಿದ್ದು ಖಂಡಿತವಾಗಿಯೂ ಈ ಬಗ್ಗೆ ಅತೀ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು