11:44 AM Saturday13 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ ‘ವಂದೇ ಮಾತರಂ ಹಾಡಿನ ಮಹತ್ವ’: ರಸ ಪ್ರಶ್ನೆ ಸ್ಪರ್ಧೆ

13/12/2025, 11:13

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ವಂದೇಮಾತರಂ ಹಾಡಿನ ೧೫೦ ವರ್ಷ ಹಾಗೂ ಭಾಷಾ ದಿನದ ಪ್ರಯುಕ್ತ ಹಿಂದಿ ವಿಭಾಗ, ಭಾಷಾ ಸಂಘ, ಸಂಸ್ಕೃತ ಸಂಘ ಹಾಗೂ ಬರೋಡ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ವಂದೇ ಮಾತರಂ ಹಾಡಿನ ಮಹತ್ವ ಅರಿವು ಮೂಡಿಸಲು ರಸ ಪ್ರಶ್ನೆ ಸ್ಪರ್ಧೆ ಆಯೋಜಿಸಲಾಯಿತು.




ಬರೋಡಾ ಬ್ಯಾಂಕಿನ ಮುಖ್ಯ ಪ್ರಬಂಧಕ ಡಾ. ಬಾಲ ಮುರುಗನ್ ಉದ್ಘಾಟಿಸಿ, ಮಾತನಾಡಿ, ಮಹಾಕವಿ ಸುಬ್ರಮಣ್ಯ ಅವರು ಭಾರತೀಯವರ ಜೀವನದ ಪ್ರಮುಖ ವಿಚಾರಗಳನ್ನು ವಿವರಿಸಿದರು. ವಂದೇಮಾತರಂ ಬರೀ ಗೀತೆ ಅಲ್ಲ ಅದು ಭಾವ ಎಂದ ಅವರು ಈ ಗೀತೆಯನ್ನು ತಮಿಳಿನಲ್ಲಿ ಹಾಡಿ ವಿದ್ಯಾರ್ಥಿಗಳ ಗಮನ ಸೆಳೆದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ವಹಿಸಿ ಮಾತನಾಡಿ, ವಂದೇ ಮಾತರಂ ಹಾಡಿನ ಮಹತ್ವವನ್ನು ತಿಳಿಸಿದ ಅವರು, ಜೀವನದುದ್ದಕ್ಕೂ ಗೌರವಿಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಕೃತ ವಿಭಾಗ ಮುಖ್ಯಸ್ಥ ಪ್ರೊ. ಕುಮಾರ ಸುಬ್ರಮಣ್ಯ ಭಟ್ ಉಪಸ್ಥಿತರಿದ್ದರು.
ಹಿಂದಿ ವಿಭಾಗ ಮುಖ್ಯಸ್ಥೆ ಪ್ರೊ. ಸುಮಾ ಟಿ.ಆರ್. ಸ್ವಾಗತಿಸಿ, ಉಪಾಧ್ಯಕ್ಷೆ ಪ್ರೊ. ನಾಗರತ್ನ ಎನ್. ರಾವ್ ವಂದಿಸಿದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ರೆಯೋನ ಕಾರ್ಯಕ್ರಮ ನಿರೂಪಿಸಿದರು.
೩೫ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು