10:44 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ ‘ವಂದೇ ಮಾತರಂ ಹಾಡಿನ ಮಹತ್ವ’: ರಸ ಪ್ರಶ್ನೆ ಸ್ಪರ್ಧೆ

13/12/2025, 11:13

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ವಂದೇಮಾತರಂ ಹಾಡಿನ ೧೫೦ ವರ್ಷ ಹಾಗೂ ಭಾಷಾ ದಿನದ ಪ್ರಯುಕ್ತ ಹಿಂದಿ ವಿಭಾಗ, ಭಾಷಾ ಸಂಘ, ಸಂಸ್ಕೃತ ಸಂಘ ಹಾಗೂ ಬರೋಡ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ವಂದೇ ಮಾತರಂ ಹಾಡಿನ ಮಹತ್ವ ಅರಿವು ಮೂಡಿಸಲು ರಸ ಪ್ರಶ್ನೆ ಸ್ಪರ್ಧೆ ಆಯೋಜಿಸಲಾಯಿತು.




ಬರೋಡಾ ಬ್ಯಾಂಕಿನ ಮುಖ್ಯ ಪ್ರಬಂಧಕ ಡಾ. ಬಾಲ ಮುರುಗನ್ ಉದ್ಘಾಟಿಸಿ, ಮಾತನಾಡಿ, ಮಹಾಕವಿ ಸುಬ್ರಮಣ್ಯ ಅವರು ಭಾರತೀಯವರ ಜೀವನದ ಪ್ರಮುಖ ವಿಚಾರಗಳನ್ನು ವಿವರಿಸಿದರು. ವಂದೇಮಾತರಂ ಬರೀ ಗೀತೆ ಅಲ್ಲ ಅದು ಭಾವ ಎಂದ ಅವರು ಈ ಗೀತೆಯನ್ನು ತಮಿಳಿನಲ್ಲಿ ಹಾಡಿ ವಿದ್ಯಾರ್ಥಿಗಳ ಗಮನ ಸೆಳೆದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ವಹಿಸಿ ಮಾತನಾಡಿ, ವಂದೇ ಮಾತರಂ ಹಾಡಿನ ಮಹತ್ವವನ್ನು ತಿಳಿಸಿದ ಅವರು, ಜೀವನದುದ್ದಕ್ಕೂ ಗೌರವಿಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಕೃತ ವಿಭಾಗ ಮುಖ್ಯಸ್ಥ ಪ್ರೊ. ಕುಮಾರ ಸುಬ್ರಮಣ್ಯ ಭಟ್ ಉಪಸ್ಥಿತರಿದ್ದರು.
ಹಿಂದಿ ವಿಭಾಗ ಮುಖ್ಯಸ್ಥೆ ಪ್ರೊ. ಸುಮಾ ಟಿ.ಆರ್. ಸ್ವಾಗತಿಸಿ, ಉಪಾಧ್ಯಕ್ಷೆ ಪ್ರೊ. ನಾಗರತ್ನ ಎನ್. ರಾವ್ ವಂದಿಸಿದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ರೆಯೋನ ಕಾರ್ಯಕ್ರಮ ನಿರೂಪಿಸಿದರು.
೩೫ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು