5:51 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

Important News : ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ

14/07/2021, 13:46

ಮಂಗಳೂರು(ReporterKarnataka.com)
ಕೊರೊನಾ ಕಾರಣದಿಂದ ಬಾಕಿ ಉಳಿದಿರುವ ಮಂಗಳೂರು ವಿಶ್ವವಿದ್ಯಾಲಯ ಅಧೀನ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ನಡೆಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಿ ಅನುಮತಿ ಪಡೆಯಲು ತೀರ್ಮಾನಿಸಿದೆ ಎನ್ನಲಾಗಿದೆ.

ಪತ್ರಿಕೆಯೊಂದಕ್ಕೆ ವಿ.ವಿ. ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ಅವರು ತಿಳಿಸಿರುವ ಪ್ರಕಾರ ಬಾಕಿ ಪರೀಕ್ಷೆಯನ್ನು ಮಾಡಿ ಮೌಲ್ಯಮಾಪನಕ್ಕೆ ಚಿಂತನೆ ನಡೆಸಲಾಗಿದೆ. ಆಗಸ್ಟ್ 10ರೊಳಗೆ ಈ ಎಲ್ಲ ಪ್ರಕ್ರಿಯೆ ಮುಗಿದ ಅನಂತರ 2, 4 ಹಾಗೂ 6ನೇ ಸೆಮಿಸ್ಟರ್‌ನ ಭೌತಿಕ ತರಗತಿ ಮಾಡಿ ಬಳಿಕ ಸೆಪ್ಟೆಂಬರ್ ವೇಳೆಗೆ ಇದರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಈ ಎಲ್ಲದರ ಬಗ್ಗೆ ಸರಕಾರದಿಂದ ಅನುಮತಿ ಪಡೆಯುವ ಹಿನ್ನೆಲೆಯಲ್ಲಿ ಪತ್ರ ಬರೆದು ಅನುಮತಿ ಪಡೆಯಲಾಗುವುದು. ಸರಕಾರದ ಅನುಮತಿ ದೊರೆತ ಅನಂತರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.

ಪರೀಕ್ಷೆ ನಡೆಸಬೇಕಾ? ಬೇಡವೇ ಎಂಬ ಬಗ್ಗೆ ಎಲ್ಲ ಕಾಲೇಜು ಪ್ರಾಂಶುಪಾಲರ ಸಭೆಯನ್ನು ನಡೆಸಲಾ ಗಿದ್ದು, ಪರೀಕ್ಷೆ ನಡೆಸುವ ಬಗ್ಗೆ ಹೆಚ್ಚಿನವರು ಒಲವು ತೋರಿದ್ದಾರೆ. ಶೇ. 70ರಷ್ಟು ಪರೀಕ್ಷೆ ಈಗಾಗಲೇ ನಡೆದಿದ್ದು ಶೇ. 30ರಷ್ಟು ಮಾತ್ರ ಬಾಕಿ ಉಳಿದಿವೆ. ಅದನ್ನು ಮುಂದಿನ ದಿನದಲ್ಲಿ ನಡೆಸುವ ಬಗ್ಗೆ ಶೀಘ್ರ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪಿ.ಎಲ್.ಧರ್ಮ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು