8:57 AM Monday23 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

Important News : ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ

14/07/2021, 13:46

ಮಂಗಳೂರು(ReporterKarnataka.com)
ಕೊರೊನಾ ಕಾರಣದಿಂದ ಬಾಕಿ ಉಳಿದಿರುವ ಮಂಗಳೂರು ವಿಶ್ವವಿದ್ಯಾಲಯ ಅಧೀನ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ನಡೆಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಿ ಅನುಮತಿ ಪಡೆಯಲು ತೀರ್ಮಾನಿಸಿದೆ ಎನ್ನಲಾಗಿದೆ.

ಪತ್ರಿಕೆಯೊಂದಕ್ಕೆ ವಿ.ವಿ. ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ಅವರು ತಿಳಿಸಿರುವ ಪ್ರಕಾರ ಬಾಕಿ ಪರೀಕ್ಷೆಯನ್ನು ಮಾಡಿ ಮೌಲ್ಯಮಾಪನಕ್ಕೆ ಚಿಂತನೆ ನಡೆಸಲಾಗಿದೆ. ಆಗಸ್ಟ್ 10ರೊಳಗೆ ಈ ಎಲ್ಲ ಪ್ರಕ್ರಿಯೆ ಮುಗಿದ ಅನಂತರ 2, 4 ಹಾಗೂ 6ನೇ ಸೆಮಿಸ್ಟರ್‌ನ ಭೌತಿಕ ತರಗತಿ ಮಾಡಿ ಬಳಿಕ ಸೆಪ್ಟೆಂಬರ್ ವೇಳೆಗೆ ಇದರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಈ ಎಲ್ಲದರ ಬಗ್ಗೆ ಸರಕಾರದಿಂದ ಅನುಮತಿ ಪಡೆಯುವ ಹಿನ್ನೆಲೆಯಲ್ಲಿ ಪತ್ರ ಬರೆದು ಅನುಮತಿ ಪಡೆಯಲಾಗುವುದು. ಸರಕಾರದ ಅನುಮತಿ ದೊರೆತ ಅನಂತರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.

ಪರೀಕ್ಷೆ ನಡೆಸಬೇಕಾ? ಬೇಡವೇ ಎಂಬ ಬಗ್ಗೆ ಎಲ್ಲ ಕಾಲೇಜು ಪ್ರಾಂಶುಪಾಲರ ಸಭೆಯನ್ನು ನಡೆಸಲಾ ಗಿದ್ದು, ಪರೀಕ್ಷೆ ನಡೆಸುವ ಬಗ್ಗೆ ಹೆಚ್ಚಿನವರು ಒಲವು ತೋರಿದ್ದಾರೆ. ಶೇ. 70ರಷ್ಟು ಪರೀಕ್ಷೆ ಈಗಾಗಲೇ ನಡೆದಿದ್ದು ಶೇ. 30ರಷ್ಟು ಮಾತ್ರ ಬಾಕಿ ಉಳಿದಿವೆ. ಅದನ್ನು ಮುಂದಿನ ದಿನದಲ್ಲಿ ನಡೆಸುವ ಬಗ್ಗೆ ಶೀಘ್ರ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪಿ.ಎಲ್.ಧರ್ಮ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು