3:06 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

Important News : ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ

14/07/2021, 13:46

ಮಂಗಳೂರು(ReporterKarnataka.com)
ಕೊರೊನಾ ಕಾರಣದಿಂದ ಬಾಕಿ ಉಳಿದಿರುವ ಮಂಗಳೂರು ವಿಶ್ವವಿದ್ಯಾಲಯ ಅಧೀನ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ನಡೆಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಿ ಅನುಮತಿ ಪಡೆಯಲು ತೀರ್ಮಾನಿಸಿದೆ ಎನ್ನಲಾಗಿದೆ.

ಪತ್ರಿಕೆಯೊಂದಕ್ಕೆ ವಿ.ವಿ. ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ಅವರು ತಿಳಿಸಿರುವ ಪ್ರಕಾರ ಬಾಕಿ ಪರೀಕ್ಷೆಯನ್ನು ಮಾಡಿ ಮೌಲ್ಯಮಾಪನಕ್ಕೆ ಚಿಂತನೆ ನಡೆಸಲಾಗಿದೆ. ಆಗಸ್ಟ್ 10ರೊಳಗೆ ಈ ಎಲ್ಲ ಪ್ರಕ್ರಿಯೆ ಮುಗಿದ ಅನಂತರ 2, 4 ಹಾಗೂ 6ನೇ ಸೆಮಿಸ್ಟರ್‌ನ ಭೌತಿಕ ತರಗತಿ ಮಾಡಿ ಬಳಿಕ ಸೆಪ್ಟೆಂಬರ್ ವೇಳೆಗೆ ಇದರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಈ ಎಲ್ಲದರ ಬಗ್ಗೆ ಸರಕಾರದಿಂದ ಅನುಮತಿ ಪಡೆಯುವ ಹಿನ್ನೆಲೆಯಲ್ಲಿ ಪತ್ರ ಬರೆದು ಅನುಮತಿ ಪಡೆಯಲಾಗುವುದು. ಸರಕಾರದ ಅನುಮತಿ ದೊರೆತ ಅನಂತರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.

ಪರೀಕ್ಷೆ ನಡೆಸಬೇಕಾ? ಬೇಡವೇ ಎಂಬ ಬಗ್ಗೆ ಎಲ್ಲ ಕಾಲೇಜು ಪ್ರಾಂಶುಪಾಲರ ಸಭೆಯನ್ನು ನಡೆಸಲಾ ಗಿದ್ದು, ಪರೀಕ್ಷೆ ನಡೆಸುವ ಬಗ್ಗೆ ಹೆಚ್ಚಿನವರು ಒಲವು ತೋರಿದ್ದಾರೆ. ಶೇ. 70ರಷ್ಟು ಪರೀಕ್ಷೆ ಈಗಾಗಲೇ ನಡೆದಿದ್ದು ಶೇ. 30ರಷ್ಟು ಮಾತ್ರ ಬಾಕಿ ಉಳಿದಿವೆ. ಅದನ್ನು ಮುಂದಿನ ದಿನದಲ್ಲಿ ನಡೆಸುವ ಬಗ್ಗೆ ಶೀಘ್ರ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪಿ.ಎಲ್.ಧರ್ಮ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು