5:53 PM Saturday26 - July 2025
ಬ್ರೇಕಿಂಗ್ ನ್ಯೂಸ್
BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ…

ಇತ್ತೀಚಿನ ಸುದ್ದಿ

ಇನಾಯತ್ ಅಲಿ ನೇತೃತ್ವದಲ್ಲಿ ಬಿರುಸಿನ ಕಾಂಗ್ರೆಸ್ ಗ್ಯಾರಂಟಿ ಅಭಿಯಾನ: ಕಾಟಿಪಳ್ಳದಲ್ಲಿ ವ್ಯಾಪಕ ಜನ ಬೆಂಬಲ

16/03/2023, 23:44

ಮಂಗಳೂರು(reporterkarnataka.com): ಕಳೆದ ಎರಡು ವಾರಗಳಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿರುವ ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಅನ್ನ ಭಾಗ್ಯ ಗ್ಯಾರಂಟಿಗಳ ನೋಂದಣಿ ಅಭಿಯಾನ ಭರದಿಂದ ಸಾಗುತ್ತಿದ್ದು, ಅದರಂತೆ ಅಭಿಯಾನವು ಗುರುವಾರ ಸುರತ್ಕಲ್ ಕಾಟಿಪಳ್ಳ ವ್ಯಾಪ್ತಿಯಲ್ಲಿ ನಡೆಯಿತು.

ಬೆಳಗ್ಗೆ ಆರಂಭವಾದ ಅಭಿಯಾನದ ಜೊತೆ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಬಾರಿ ಸಂಖ್ಯೆಯಲ್ಲಿ ಸಾಥ್ ನೀಡಿದರು.
ಈ ಸಂಧರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಇನಾಯತ್ ಅಲಿ ಅವರು ರಾಜ್ಯದಲ್ಲಿ ತಾಂಡವವಾಡುತ್ತಿರುವ ವ್ಯಾಪಕ ಭ್ರಷ್ಟಾಚಾರ, ನಿರುದ್ಯೋಗ ಸಮಸ್ಯೆ, ಅವೈಜ್ಞಾನಿಕ ತೆರಿಗೆ ನೀತಿಗಳಿಂದ ಜನರ ಬದುಕು ದುಸ್ತರವಾಗಿದ್ದು, ಇದಕ್ಕೆಲ್ಲದಕ್ಕೂ ಪರಿಹಾರ ಎಂಬಂತೆ ಜನರು ಕಾಂಗ್ರೆಸ್ ಪಕ್ಷದ ಮೇಲೆ ಬಾರಿ ನಿರೀಕ್ಷೆ ಮತ್ತು ಭರವಸೆ ಇಟ್ಟುಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ನಾವು ಮನೆಗೆ ಭೇಟಿ ನೀಡುತ್ತಿರುವ ಸಂಧರ್ಭದಲ್ಲಿ ಆರ್ಥಿಕವಾಗಿ ಕಂಗೆಟ್ಟಿರುವ ಜನರು ನಮ್ಮಲ್ಲಿ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕಪಡಿಸುತ್ತಿದ್ದಾರೆ.


ಬಿಜೆಪಿಯ ಸರ್ವಾಧಿಕಾರಿ ಆಡಳಿತಕ್ಕೆ ಈ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಈ ಸಂಧರ್ಭದಲ್ಲಿ ಕೆಪಿಸಿಸಿ ಸದಸ್ಯ ಪ್ರಥ್ವಿರಾಜ ಆರ್.ಕೆ, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ, ಕಾಟಿಪಳ್ಳ ವಾರ್ಡ್ ಅಧ್ಯಕ್ಷ ನಿತ್ಯಾನಂದ, ಮಾಜಿ ಕಾರ್ಪೊರೇಟರ್ ಸುಂದರ ಶೆಟ್ಟಿ ಹಾಗೂ ಸವಿತಾ ಶೆಟ್ಟಿ, ಬ್ಲಾಕ್ ಇಂಟಕ್ ಘಟಕದ ಅಧ್ಯಕ್ಷ ಥೋಮಸ್, ವಿಠ್ಠಲ ಶೆಟ್ಟಿ, ಶಮೀರ್ ಕಾಟಿಪಳ್ಳ, ಬಾಷ ಗುರುಪುರ, ಜಲೀಲ್ ಬದ್ರಿಯಾ, ಮುಫೀದ್ ಅಡ್ಯಾರ್, ಸತ್ತಾರ್ ಕೃಷ್ಣಾಪುರ, ನಝೀರ್ ಕಾಟಿಪಳ್ಳ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು