10:13 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಇನಾಯತ್ ಅಲಿ ನೇತೃತ್ವದಲ್ಲಿ ಬಿರುಸಿನ ಕಾಂಗ್ರೆಸ್ ಗ್ಯಾರಂಟಿ ಅಭಿಯಾನ: ಕಾಟಿಪಳ್ಳದಲ್ಲಿ ವ್ಯಾಪಕ ಜನ ಬೆಂಬಲ

16/03/2023, 23:44

ಮಂಗಳೂರು(reporterkarnataka.com): ಕಳೆದ ಎರಡು ವಾರಗಳಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿರುವ ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಅನ್ನ ಭಾಗ್ಯ ಗ್ಯಾರಂಟಿಗಳ ನೋಂದಣಿ ಅಭಿಯಾನ ಭರದಿಂದ ಸಾಗುತ್ತಿದ್ದು, ಅದರಂತೆ ಅಭಿಯಾನವು ಗುರುವಾರ ಸುರತ್ಕಲ್ ಕಾಟಿಪಳ್ಳ ವ್ಯಾಪ್ತಿಯಲ್ಲಿ ನಡೆಯಿತು.

ಬೆಳಗ್ಗೆ ಆರಂಭವಾದ ಅಭಿಯಾನದ ಜೊತೆ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಬಾರಿ ಸಂಖ್ಯೆಯಲ್ಲಿ ಸಾಥ್ ನೀಡಿದರು.
ಈ ಸಂಧರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಇನಾಯತ್ ಅಲಿ ಅವರು ರಾಜ್ಯದಲ್ಲಿ ತಾಂಡವವಾಡುತ್ತಿರುವ ವ್ಯಾಪಕ ಭ್ರಷ್ಟಾಚಾರ, ನಿರುದ್ಯೋಗ ಸಮಸ್ಯೆ, ಅವೈಜ್ಞಾನಿಕ ತೆರಿಗೆ ನೀತಿಗಳಿಂದ ಜನರ ಬದುಕು ದುಸ್ತರವಾಗಿದ್ದು, ಇದಕ್ಕೆಲ್ಲದಕ್ಕೂ ಪರಿಹಾರ ಎಂಬಂತೆ ಜನರು ಕಾಂಗ್ರೆಸ್ ಪಕ್ಷದ ಮೇಲೆ ಬಾರಿ ನಿರೀಕ್ಷೆ ಮತ್ತು ಭರವಸೆ ಇಟ್ಟುಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ನಾವು ಮನೆಗೆ ಭೇಟಿ ನೀಡುತ್ತಿರುವ ಸಂಧರ್ಭದಲ್ಲಿ ಆರ್ಥಿಕವಾಗಿ ಕಂಗೆಟ್ಟಿರುವ ಜನರು ನಮ್ಮಲ್ಲಿ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕಪಡಿಸುತ್ತಿದ್ದಾರೆ.


ಬಿಜೆಪಿಯ ಸರ್ವಾಧಿಕಾರಿ ಆಡಳಿತಕ್ಕೆ ಈ ಚುನಾವಣೆಯಲ್ಲಿ ರಾಜ್ಯದ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಈ ಸಂಧರ್ಭದಲ್ಲಿ ಕೆಪಿಸಿಸಿ ಸದಸ್ಯ ಪ್ರಥ್ವಿರಾಜ ಆರ್.ಕೆ, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ, ಕಾಟಿಪಳ್ಳ ವಾರ್ಡ್ ಅಧ್ಯಕ್ಷ ನಿತ್ಯಾನಂದ, ಮಾಜಿ ಕಾರ್ಪೊರೇಟರ್ ಸುಂದರ ಶೆಟ್ಟಿ ಹಾಗೂ ಸವಿತಾ ಶೆಟ್ಟಿ, ಬ್ಲಾಕ್ ಇಂಟಕ್ ಘಟಕದ ಅಧ್ಯಕ್ಷ ಥೋಮಸ್, ವಿಠ್ಠಲ ಶೆಟ್ಟಿ, ಶಮೀರ್ ಕಾಟಿಪಳ್ಳ, ಬಾಷ ಗುರುಪುರ, ಜಲೀಲ್ ಬದ್ರಿಯಾ, ಮುಫೀದ್ ಅಡ್ಯಾರ್, ಸತ್ತಾರ್ ಕೃಷ್ಣಾಪುರ, ನಝೀರ್ ಕಾಟಿಪಳ್ಳ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು