2:52 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ನೇಮಕಾತಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ವಿಧಾನ ಪರಿಷತ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

11/12/2025, 19:50

ಬೆಳಗಾವಿ(reporterkarnataka.com): ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು.
ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು