12:12 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

12/12/2025, 09:28

ಬೆಂಗಳೂರು(reporterkarnataka.com): ಕಳೆದ ಒಂದು ತಿಂಗಳಲ್ಲಿ ಹಲವಾರು ತಾಂತ್ರಿಕ ವಲಯದಲ್ಲಿ ಬಹಳ ಪರಿಣಿತಿ ಹೊಂದಿರುವ ಕಂಪನಿಗಳಾದ ಮೈಕ್ರೊಸಾಫ್ಟ್‌, ಗೂಗಲ್, ಅಮೇಜಾನ್ ಕಂಪನಿಗಳು ಭಾರತ ಸರ್ಕಾರಕ್ಕೆ ದೊಡ್ಡ ಪ್ರಮಾಣದ ಹಣ ಹೂಡಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ಆಶಿರ್ವಾದದೊಂದಿಗೆ ಹಣ ಹೂಡಲು ಒಪ್ಪಂದ ಮಾಡಿಕೊಂಡಿವೆ. ಇದು ಭಾರತ ಪ್ರಬಲ ಆರ್ಥಿಕ ಶಕ್ತಿ ಎಂಬುದನ್ನು ತೋರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಈ ಸಂಸ್ಥೆಗಳಿಗೆ ಏನೆಲ್ಲ ಕಾನೂನು ಅಡಚಣೆ ಮಾಡಿದರೂ, ಭಾರತದ ನಾಯಕತ್ವ ನರೇಂದ್ರ ಮೋದಿಯವರ ಮೇಲೆ ನಂಬಿಕೆ ಇಟ್ಟು ಮತ್ತು ಭಾರತದಲ್ಲಿರುವ ತಾಂತ್ರಿಕ ಪರಿಣಿತ ಯುವಕರ ಮೇಲೆ ನಂಬಿಕೆ ಇಟ್ಟು ಹೂಡಿಕೆ ಮಾಡಿದ್ದಾರೆ. ಇದು ಅಭಿವೃದ್ದಿಗೆ ದೊಡ್ಡ ಇಂಬು ಕೊಡುವಂತದ್ದು, ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಎಫ್ ಡಿಐ ಹೂಡಿಕೆ ಆಗುತ್ತಿರುವುದು ಸಂತಸದ ಸಂಗತಿ. ಪ್ರಧಾನಿ ನರೇಂದ್ರ ಮೋದಿಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಹಾಗೂ ಎಲ್ಲ ಕಂಪನಿಗಳಿಗೆ ಶುಭ ಕೋರುತ್ತೇನೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು