4:49 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ನಾರಾಯಣಪುರ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಕೃಷ್ಣಾ ನದಿಯಿಂದ 1.10.000 ಸಾವಿರ ಕ್ಯುಸೆಕ್ ನೀರು ಬಿಡುಗಡೆ

29/06/2025, 16:14

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರ ಬಸವಸಾಗರ ಜಲಾಶಯದ 30 ಕ್ರಸ್ಟ ಗೇಟ್‌ಗಳನ್ನು ತೆರದು 1,00,085 ಕ್ಯೂಸೆಕ್ಸ್ ಹಾಗೂ 6,000 ಸಾವಿರ ಕ್ಯುಸೆಕ್ ನಷ್ಟು ನೀರನ್ನು ಎಂ.ಪಿ.ಸಿ.ಎಲ್ ನಿಂದ ಹರಿಬಿಡಲಾಗುತ್ತಿದೆ. ಭಾನುವಾರ ಆಲಮಟ್ಟಿ ಶಾಸ್ತ್ರೀ ಸಾಗರದಿಂದ 1.10.000 ಸಾವಿರ ಕ್ಯುಸೆಕ್ ಪ್ರಮಾಣದಷ್ಟು ನೀರಿನ ಒಳಹರಿವು ಬರುತ್ತಿದ್ದು, ಜಲಾಶಯಕ್ಕೆ ಬರುವ ಒಳಹರಿವು ಗಮನಿಸಿ ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತಿದೆ.
ಕೃಷ್ಣಾ ಪ್ರದೇಶದಲ್ಲಿ ಜಲಾನಯನ ನಿರಂತರ ಮಳೆಯಾಗುತ್ತಿರುವದರಿಂದ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ. ಪ್ರತಿ ಉಭಯ ಗಂಟೆಗೊಮ್ಮೆ ಜಲಾಶಯಗಳ ಅಧಿಕಾರಿಗಳು ನದಿಗೆ ನೀರು ಹರಿಸುವ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಒಂದೊಮ್ಮೆ ಒಳಹರಿವು ಹೆಚ್ಚಾದರೆ ಹೊರ ಹರಿವು ಹೆಚ್ಚಿಸಲಾಗುತ್ತದೆ. ಒಳಹರಿವು ತಗ್ಗಿದರೆ ಹೊರ ಹರಿವು ಕಡಿಮೆ ಆಗುತ್ತದೆ. ಹಿಗಾಗಿ ನದಿ ತೀರದ ಗ್ರಾಮಗಳ ಜನರು ಎಚ್ಚರದಿಂದ ಇರಬೇಕು ಎಂದು ಕೆಬಿಜೆಎನ್‌ಎಲ್ ಅಧಿಕಾರಿಗಳು ವಿಜಯ ಅರಳಿಯವರು ಮಾಹಿತಿ ನೀಡಿದ್ದಾರೆ. ಅಧಿಕಾರಿಗಳ ಮಾಹಿತಿಯಂತೆ ಗರಿಷ್ಠ 492.25 -ರ ಎತ್ತರದಲ್ಲಿ 33.313 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 492.25 ಮೀಟರಗೆ ನೀರು ಬಂದು ತಲುಪಿದ್ದು, ಮಾಹಿತಿ 26.74 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು