9:05 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಇಂಧನ ಬೆಲೆ ಇಳಿಕೆ ಸಂತಸ ತಂದಿದೆ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ: ಶಾಸಕ ವೇದವ್ಯಾಸ ಕಾಮತ್

07/11/2021, 13:34

ಮಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯ ಇಂಧನ ಮೇಲಿನ ಬೆಲೆ ಇಳಿಕೆ ಮಾಡಿದ ಕ್ರಮ ಶ್ಲಾಾಘನೀಯವಾಗಿದ್ದು, ಇದು ದೀಪಾವಳಿ ವೇಳೆಗೆ ಕೊಡುಗೆಯಾಗಿದೆ. ಇದರಿಂದ ಎಲ್ಲ ಜನತೆಗೆ ಪ್ರಯೋಜನ ಲಭಿಸಿದಂತಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ರಾಜಕೀಯ ಇಲ್ಲ ಎಂದು ಶಾಸಕ ವೇದವ್ಯಾಾಸ ಕಾಮತ್ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಿವಾರ್ಯ ಕಾರಣಗಳಿಂದ ಇಂಧನ ಬೆಲೆ ಏರಿಕೆಯಾಗಿತ್ತು. ಇದೀಗ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಇದರಿಂದಾಗಿ ತೈಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದನ್ನು ಬೇರೆಯೇ ರೀತಿಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿನಾ ಕಾರಣ ಟೀಕಿಸುತ್ತಿವೆ. ಇಂಧನ ಬೆಲೆ ಇಳಿಕೆಗೂ ದೇಶದಲ್ಲಿ ನಡೆದ ಉಪಚುನಾವಣೆ ಫಲಿತಾಂಶಗಳಿಗೂ ಯಾವುದೇ ಸಂಬಂಧ ಇಲ್ಲ. ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು
ಹಾಗೂ ಜನತೆಯಲ್ಲಿ ತಪ್ಪು ಅಭಿಪ್ರಾಾಯ ಮೂಡಿಸಲು ಕಾಂಗ್ರೆಸ್ ಹಾಗೂ ವಿಪಕ್ಷಗಳು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿವೆ. 

ಇದಕ್ಕೆ ಜನತೆ ಕಿವಿಗೊಡಬೇಕಾಗಿಲ್ಲ ಎಂದು ವೇದವ್ಯಾಾಸ ಕಾಮತ್ ವಿನಂತಿಸಿದ್ದಾಾರೆ.

ಇತ್ತೀಚಿನ ಸುದ್ದಿ

ಜಾಹೀರಾತು