7:15 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಇಂಧನ ಬೆಲೆ ಇಳಿಕೆ ಸಂತಸ ತಂದಿದೆ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ: ಶಾಸಕ ವೇದವ್ಯಾಸ ಕಾಮತ್

07/11/2021, 13:34

ಮಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯ ಇಂಧನ ಮೇಲಿನ ಬೆಲೆ ಇಳಿಕೆ ಮಾಡಿದ ಕ್ರಮ ಶ್ಲಾಾಘನೀಯವಾಗಿದ್ದು, ಇದು ದೀಪಾವಳಿ ವೇಳೆಗೆ ಕೊಡುಗೆಯಾಗಿದೆ. ಇದರಿಂದ ಎಲ್ಲ ಜನತೆಗೆ ಪ್ರಯೋಜನ ಲಭಿಸಿದಂತಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ರಾಜಕೀಯ ಇಲ್ಲ ಎಂದು ಶಾಸಕ ವೇದವ್ಯಾಾಸ ಕಾಮತ್ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಿವಾರ್ಯ ಕಾರಣಗಳಿಂದ ಇಂಧನ ಬೆಲೆ ಏರಿಕೆಯಾಗಿತ್ತು. ಇದೀಗ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಇದರಿಂದಾಗಿ ತೈಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದನ್ನು ಬೇರೆಯೇ ರೀತಿಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿನಾ ಕಾರಣ ಟೀಕಿಸುತ್ತಿವೆ. ಇಂಧನ ಬೆಲೆ ಇಳಿಕೆಗೂ ದೇಶದಲ್ಲಿ ನಡೆದ ಉಪಚುನಾವಣೆ ಫಲಿತಾಂಶಗಳಿಗೂ ಯಾವುದೇ ಸಂಬಂಧ ಇಲ್ಲ. ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು
ಹಾಗೂ ಜನತೆಯಲ್ಲಿ ತಪ್ಪು ಅಭಿಪ್ರಾಾಯ ಮೂಡಿಸಲು ಕಾಂಗ್ರೆಸ್ ಹಾಗೂ ವಿಪಕ್ಷಗಳು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿವೆ. 

ಇದಕ್ಕೆ ಜನತೆ ಕಿವಿಗೊಡಬೇಕಾಗಿಲ್ಲ ಎಂದು ವೇದವ್ಯಾಾಸ ಕಾಮತ್ ವಿನಂತಿಸಿದ್ದಾಾರೆ.

ಇತ್ತೀಚಿನ ಸುದ್ದಿ

ಜಾಹೀರಾತು