12:50 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಇಂಧನ ಇಲಾಖೆಯಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಚಿಂತನೆ: PIAGGIO ಸಂಸ್ಥೆಯ ವಿದ್ಯುತ್ ಚಾಲಿತ‌ ತ್ರಿಚಕ್ರ ವಾಹನ‌ ಶೋ ರೂಂ ಉದ್ಘಾಟಿಸಿ ಸಚಿವ ಸುನಿಲ್ 

16/10/2021, 18:43

ಮಂಗಳೂರು(reporterkarnataka.com): ರಾಜ್ಯ ಸರಕಾರದ ಇಂಧನ ಇಲಾಖೆಯಲ್ಲಿ ಬಳಕೆ ಮಾಡುತ್ತಿರುವ ಸರ್ಕಾರಿ ವಾಹನಗಳು‌ ವಿದ್ಯುತ್ ಚಾಲಿತ ವಾಹನಗಳಾಗಬೇಕು‌ ಎನ್ನುವ ಚಿಂತನೆಯಿದೆ ಎಂದು ಇಂಧನ ಸಚಿವ ವಿ‌. ಸುನಿಲ್‌ ಕುಮಾರ್ ಹೇಳಿದರು.

ಅವರು ಶನಿವಾರ ನಗರದ ಪಂಪ್ ವೆಲ್ ಬಳಿ ನೂತನ PIAGGIO ಸಂಸ್ಥೆಯ ವಿದ್ಯುತ್ ಚಾಲಿತ‌ ತ್ರಿಚಕ್ರ ವಾಹನ‌ ಶೋ ರೂಂ ಉದ್ಘಾಟಿಸಿ ಮಾತನಾಡಿದರು.

ಇಂದು‌ ದೇಶಾದ್ಯಂತ ವಿದ್ಯುತ್ ‌ಚಾಲಿತ ವಾಹನ‌ಗಳ‌ ಬೇಡಿಕೆ ಹೆಚ್ಚಾಗುತ್ತಿದೆ. ಸರ್ಕಾರವೂ ಕೂಡ ಎಲ್ಲ ಹಂತದಲ್ಲಿ ವಿದ್ಯುತ್ ಚಾಲಿತ ವಾಹಗಳಿಗೆ ಹೆಚ್ಚಿನ ಒತ್ತು‌ ನೀಡುತ್ತಿದೆ‌ ಎಂದರು. ಪೆಟ್ರೋಲ್ ಹಾಗೂ ಡೀಸಲ್ ವಾಹನಗಳಿಂದಾಗಿ ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ‌, ಬೆಲೆಯೂ ಹೆಚ್ಚು ಎನ್ನು‌ವ ಕೂಗುಗಳು ಕೇಳಿ ಬರುತ್ತವೆ. ಹೀಗಿರುವಾಗ ವಿದ್ಯುತ್ ಚಾಲಿತ ವಾಹನಗಳು ಇಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿದೆ.

ಇಂಧನ ಇಲಾಖೆ‌ ವಹಿಸಿಕೊಂಡ‌ ನಂತರ ವಿದ್ಯುತ್ ಚಾಲಿತ ವಾಹನ ತಯಾರಕ ಕಂಪನಿಗಳ‌ ಸಭೆ‌ ನಡೆಸಲಾಗಿತ್ತು. ವಿದ್ಯುತ್ ಚಾಲಿತ ವಾಹನಗಳು ಮುನ್ನಲೆಗೆ ಬರಬೇಕು, ಜನರು ಹೆಚ್ಚು ಆಕರ್ಷಿತರಾಗಬೇಕು. ಇಂದಿನ‌ ವ್ಯವಸ್ಥೆಯಿಂದ‌ ಸುಧಾರಣೆ ಹೊಂದಬೇಕೆಂದು.  ಪೆಟ್ರೋಲ್‌, ಡೀಸಲ್ ವಾಹನಗಳಿಂದ ವಿದ್ಯುತ್ ಚಾಲಿತ ವಾಹನಗಳ‌ ಕಡೆ‌ ಮುಖ ಮಾಡೋದು ಸುಧಾರಣೆಯ ಒಂದು ಭಾಗ, ಜನರು ಬದಲಾವಣೆ ಕಡೆಗೆ ಹೆಜ್ಜೆಯನ್ನ‌ ಇಡಬೇಕು ಎಂದರು.

ವಿದ್ಯುತ್ ಚಾಲಿತ ವಾಹನಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ೨೦-೪೦% ಸಬ್ಸಿಡಿ ನೀಡಲಾಗುತ್ತಿದೆ. ತ್ರಿಚಕ್ರ ವಾಹನಗಳಿಗೆ ಸುಮಾರು 60 ಸಾವಿರ ರೂ. ಸಬ್ಸಿಡಿ‌ ದೊರೆಯುವುದರಿಂದ ಗ್ರಾಹಕರಿಗೆ‌‌ ಹೆಚ್ಚಿನ‌ ಅನುಕೂಲವಾಗಲಿದೆ ಎಂದು‌ ಸಚಿವರು ಅಭಿಪ್ರಾಯ ಪಟ್ಟರು. 

ಇನ್ನು‌ ಇಲಾಖೆ ರಾಜ್ಯದ ವಿವಿಧ ಭಾಗಗಳಲ್ಲಿ ಒಂದು ಸಾವಿರ ವಿದ್ಯುತ್ ವಾಹನ‌ ಚಾರ್ಜಿಂಗ್ ಕೇಂದ್ರ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದರು.


ವಾಹನಗಳ ವಿಚಾರದಲ್ಲಿ ವಿದ್ಯುತ್ ವಾಹನಗಳು‌ ಮುಂದಿನ‌ ಭವಿಷ್ಯ,ಹಾಗಾಗಿ ಆ ನಿಟ್ಟಿನಲ್ಲಿ ಆಲೋಚನೆ‌ ಮಾಡಬೇಕಿದೆ. ವಿದ್ಯುತ್ ಚಾಲಿತ ವಾಹನಗಳ‌ ಬಳಕೆಗೆ ಉತ್ತೇಜನ‌ ಇಂಧನ ಇಲಾಖೆಯಿಂದಲೇ‌ ಆರಂಭವಾಗಲೆಂದು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಳಸುವ ಸರ್ಕಾರಿ ವಾಹನಗಳು ವಿದ್ಯುತ್ ಚಾಲಿತ ವಾಹನಗಳಾಗಬೇಕು ಎನ್ನುವ ಚಿಂತನೆ‌ ಇದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು