2:03 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಇಂಧನ ಇಲಾಖೆಯಲ್ಲಿ ವಿದ್ಯುತ್ ಚಾಲಿತ ವಾಹನ ಬಳಕೆಗೆ ಚಿಂತನೆ: PIAGGIO ಸಂಸ್ಥೆಯ ವಿದ್ಯುತ್ ಚಾಲಿತ‌ ತ್ರಿಚಕ್ರ ವಾಹನ‌ ಶೋ ರೂಂ ಉದ್ಘಾಟಿಸಿ ಸಚಿವ ಸುನಿಲ್ 

16/10/2021, 18:43

ಮಂಗಳೂರು(reporterkarnataka.com): ರಾಜ್ಯ ಸರಕಾರದ ಇಂಧನ ಇಲಾಖೆಯಲ್ಲಿ ಬಳಕೆ ಮಾಡುತ್ತಿರುವ ಸರ್ಕಾರಿ ವಾಹನಗಳು‌ ವಿದ್ಯುತ್ ಚಾಲಿತ ವಾಹನಗಳಾಗಬೇಕು‌ ಎನ್ನುವ ಚಿಂತನೆಯಿದೆ ಎಂದು ಇಂಧನ ಸಚಿವ ವಿ‌. ಸುನಿಲ್‌ ಕುಮಾರ್ ಹೇಳಿದರು.

ಅವರು ಶನಿವಾರ ನಗರದ ಪಂಪ್ ವೆಲ್ ಬಳಿ ನೂತನ PIAGGIO ಸಂಸ್ಥೆಯ ವಿದ್ಯುತ್ ಚಾಲಿತ‌ ತ್ರಿಚಕ್ರ ವಾಹನ‌ ಶೋ ರೂಂ ಉದ್ಘಾಟಿಸಿ ಮಾತನಾಡಿದರು.

ಇಂದು‌ ದೇಶಾದ್ಯಂತ ವಿದ್ಯುತ್ ‌ಚಾಲಿತ ವಾಹನ‌ಗಳ‌ ಬೇಡಿಕೆ ಹೆಚ್ಚಾಗುತ್ತಿದೆ. ಸರ್ಕಾರವೂ ಕೂಡ ಎಲ್ಲ ಹಂತದಲ್ಲಿ ವಿದ್ಯುತ್ ಚಾಲಿತ ವಾಹಗಳಿಗೆ ಹೆಚ್ಚಿನ ಒತ್ತು‌ ನೀಡುತ್ತಿದೆ‌ ಎಂದರು. ಪೆಟ್ರೋಲ್ ಹಾಗೂ ಡೀಸಲ್ ವಾಹನಗಳಿಂದಾಗಿ ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ‌, ಬೆಲೆಯೂ ಹೆಚ್ಚು ಎನ್ನು‌ವ ಕೂಗುಗಳು ಕೇಳಿ ಬರುತ್ತವೆ. ಹೀಗಿರುವಾಗ ವಿದ್ಯುತ್ ಚಾಲಿತ ವಾಹನಗಳು ಇಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿದೆ.

ಇಂಧನ ಇಲಾಖೆ‌ ವಹಿಸಿಕೊಂಡ‌ ನಂತರ ವಿದ್ಯುತ್ ಚಾಲಿತ ವಾಹನ ತಯಾರಕ ಕಂಪನಿಗಳ‌ ಸಭೆ‌ ನಡೆಸಲಾಗಿತ್ತು. ವಿದ್ಯುತ್ ಚಾಲಿತ ವಾಹನಗಳು ಮುನ್ನಲೆಗೆ ಬರಬೇಕು, ಜನರು ಹೆಚ್ಚು ಆಕರ್ಷಿತರಾಗಬೇಕು. ಇಂದಿನ‌ ವ್ಯವಸ್ಥೆಯಿಂದ‌ ಸುಧಾರಣೆ ಹೊಂದಬೇಕೆಂದು.  ಪೆಟ್ರೋಲ್‌, ಡೀಸಲ್ ವಾಹನಗಳಿಂದ ವಿದ್ಯುತ್ ಚಾಲಿತ ವಾಹನಗಳ‌ ಕಡೆ‌ ಮುಖ ಮಾಡೋದು ಸುಧಾರಣೆಯ ಒಂದು ಭಾಗ, ಜನರು ಬದಲಾವಣೆ ಕಡೆಗೆ ಹೆಜ್ಜೆಯನ್ನ‌ ಇಡಬೇಕು ಎಂದರು.

ವಿದ್ಯುತ್ ಚಾಲಿತ ವಾಹನಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ೨೦-೪೦% ಸಬ್ಸಿಡಿ ನೀಡಲಾಗುತ್ತಿದೆ. ತ್ರಿಚಕ್ರ ವಾಹನಗಳಿಗೆ ಸುಮಾರು 60 ಸಾವಿರ ರೂ. ಸಬ್ಸಿಡಿ‌ ದೊರೆಯುವುದರಿಂದ ಗ್ರಾಹಕರಿಗೆ‌‌ ಹೆಚ್ಚಿನ‌ ಅನುಕೂಲವಾಗಲಿದೆ ಎಂದು‌ ಸಚಿವರು ಅಭಿಪ್ರಾಯ ಪಟ್ಟರು. 

ಇನ್ನು‌ ಇಲಾಖೆ ರಾಜ್ಯದ ವಿವಿಧ ಭಾಗಗಳಲ್ಲಿ ಒಂದು ಸಾವಿರ ವಿದ್ಯುತ್ ವಾಹನ‌ ಚಾರ್ಜಿಂಗ್ ಕೇಂದ್ರ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದರು.


ವಾಹನಗಳ ವಿಚಾರದಲ್ಲಿ ವಿದ್ಯುತ್ ವಾಹನಗಳು‌ ಮುಂದಿನ‌ ಭವಿಷ್ಯ,ಹಾಗಾಗಿ ಆ ನಿಟ್ಟಿನಲ್ಲಿ ಆಲೋಚನೆ‌ ಮಾಡಬೇಕಿದೆ. ವಿದ್ಯುತ್ ಚಾಲಿತ ವಾಹನಗಳ‌ ಬಳಕೆಗೆ ಉತ್ತೇಜನ‌ ಇಂಧನ ಇಲಾಖೆಯಿಂದಲೇ‌ ಆರಂಭವಾಗಲೆಂದು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬಳಸುವ ಸರ್ಕಾರಿ ವಾಹನಗಳು ವಿದ್ಯುತ್ ಚಾಲಿತ ವಾಹನಗಳಾಗಬೇಕು ಎನ್ನುವ ಚಿಂತನೆ‌ ಇದೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು