7:50 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ ಆಫರ್ ಬಹಿರಂಗ

06/08/2026, 19:49

ಬೆಂಗಳೂರು(reporterkarnataka.com): ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಕೊನೆಗೂ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಈ ಘೋಷಣೆಯ ಜೊತೆಗೆ ಸಚಿವ ಲಕ್ಷ್ಮಣ ಸವದಿ ಮಾಡಿದ್ದ ಅಚ್ಚರಿಯ ಆಫರ್‌ನ್ನೂ ಬಹಿರಂಗಪಡಿಸಿದ್ದಾರೆ. ಇಂಡಿಯಲ್ಲಿ ಪಕ್ಷದ ಮುಖಂಡರು, ಬೆಂಬಲಿಗರು ಹಾಗೂ ಆಪ್ತರ ಸಭೆ ನಡೆಸಿದ ಬಳಿಕ ಮಾತನಾಡಿದ ಯಶವಂತರಾಯಗೌಡ ಪಾಟೀಲ್, ಸಚಿವ ಲಕ್ಷ್ಮಣ ಸವದಿ ಖುದ್ದಾಗಿ ಭೇಟಿಯಾಗಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವಿ ಮಾಡಿದ್ದರು ಎಂದು ತಿಳಿಸಿದ್ದಾರೆ.

‘ಬೇಕಿದ್ದರೆ ಲಿಂಗಾಯತ ಕೋಟಾದಡಿಯಲ್ಲಿ ನನಗೆ ಸಿಕ್ಕಿರುವ ಸಚಿವ ಸ್ಥಾನವನ್ನೇ ನಿಮಗಾಗಿ ಬಿಟ್ಟುಕೊಡುತ್ತೇನೆ’ ಎಂದು ಲಕ್ಷ್ಮಣ ಸವದಿ ಹೇಳಿದ್ದರು. ಆದರೆ, “ನನಗೆ ಅಷ್ಟೊಂದು ಸಹಾನುಭೂತಿ ಬೇಡ” ಎಂದು ನಾನು ಅವರ ಪ್ರಸ್ತಾವವನ್ನು ಗೌರವಪೂರ್ವಕವಾಗಿ ತಿರಸ್ಕರಿಸಿದ್ದೇನೆ ಎಂದು ಯಶವಂತರಾಯಗೌಡ ಪಾಟೀಲ್ ತಿಳಿಸಿದ್ದಾರೆ.ತಮ್ಮ ಕ್ಷೇತ್ರದ ಜನರ ಅಭಿಪ್ರಾಯ ಸಂಗ್ರಹಿಸಿದ ಬಳಿಕವೇ ರಾಜೀನಾಮೆ ವಾಪಸ್ ಪಡೆಯುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದು, ಈ ವಿಚಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ಹೋಗಿದೆ ಎಂದರು.

“ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್ ಇದೆ. ನನ್ನ ಕುಟುಂಬವೇ ಕಾಂಗ್ರೆಸ್ ಕುಟುಂಬ. ನಾನು ಪಕ್ಷದೊಳಗೂ, ಪಕ್ಷದ ಹೊರಗೂ ಚುನಾವಣೆ ಎದುರಿಸಿ ಗೆದ್ದಿದ್ದೇನೆ” ಎಂದು ಪಕ್ಷದ ಮೇಲಿನ ತಮ್ಮ ನಿಷ್ಠೆಯನ್ನು ಪುನರುಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು