9:21 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಭಾರತೀಯ ವಾಯುಪಡೆಯ ಮಿರಾಜ್ ಪತನ: ಪೈಲಟ್ ಸುರಕ್ಷಿತವಾಗಿ ಪಾರು; ಮಧ್ಯಪ್ರದೇಶದಲ್ಲಿ ದುರ್ಘಟನೆ

21/10/2021, 23:02

ಗ್ವಾಲಿಯರ್(reporterkarnataka.com):

ಭಾರತೀಯ ವಾಯುಪಡೆಯ ಮಿರಾಜ್ 2000 ಯುದ್ಧ ವಿಮಾನ ಗುರುವಾರ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಬಳಿ ಪತನಗೊಂಡಿದ್ದು, ಪೈಲಟ್ ಹೊರಗೆ ಧುಮುಕಿ ಬಚಾವ್ ಆಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಪೈಲಟ್ ಸುರಕ್ಷಿತವಾಗಿ ಹೊರಹಾಕಲ್ಪಟ್ಟರು ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ. ಇಂದು ಮುಂಜಾನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮೀರಜ್ 2000 ಏರ್‍ಕ್ರಾಫ್ಟ್ ಹಾರಾಟ ನಡೆಸುತ್ತಿದ್ದಾಗ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ವಿಮಾನ ಪತನಗೊಂಡಿದೆ.  ವಿಮಾನ ಪತನದ ಮುನ್ಸೂಚನೆ ದೊರೆಯುತ್ತಿದ್ದಂತೆ ಪೈಲಟ್ ವಿಮಾನದಿಂದ ಪ್ಯಾರಾಚೂಟ್ ಮೂಲಕ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಮನಕ್‍ಭಾಗ್ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತು. ನೋಡ ನೋಡುತ್ತಿದ್ದಂತೆ ವಿಮಾನ ಪತನವಾಯಿತು. ಪೈಲಟ್ ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ಭೀಂಡ್ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇಂದು ಮುಂಜಾನೆ ಗ್ವಾಲಿಯರ್‍ನಲ್ಲಿರುವ ಏರ್‍ಬೇಸ್‍ನಿಂದ ವಿಮಾನ ಹಾರಾಟ ಆರಂಭಿಸಿತ್ತು. ಘಟನಾ ಸ್ಥಳಕ್ಕೆ ಜಿಲ್ಲಾಡಳಿತ ಹಾಗೂ ವಾಯುಪಡೆ ಅಕಾರಿಗಳು ದೌಡಾಯಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು