7:48 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಇಂಡಿಯನ್ ಎಂಪೈರ್ ಯುನಿವರ್ಸಿಟಿ: ಪತ್ರಕರ್ತ ಮಂದಾರ ರಾಜೇಶ್ ಭಟ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

17/07/2022, 12:14

ಮಂಗಳೂರು(reporterkarnataka.com):ಯುನಿವರ್ಸಲ್ ಡೆವಲಪ್ಮೆಂಟ್ ಕೌನ್ಸಿಲ್  ಹಾಗೂ ಇಂಡಿಯನ್ ಎಂಪೈರ್ ಯುನಿವರ್ಸಿಟಿ ಪತ್ರಕರ್ತ ಮಂದಾರ ರಾಜೇಶ್ ಭಟ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಅವರ ಪರಿಸರ ಸಂರಕ್ಷಣೆ ಮತ್ತು ಮಾಧ್ಯಮ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ.

ಮಂದಾರ ಮನೆತನದಲ್ಲಿ ಜನಿಸಿದ ಮಂದಾರ ರಾಜೇಶ್ ಭಟ್ಟರು ಕೇಂದ್ರ ಭಾಷಾ ಸಮ್ಮಾನ್ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಥಮ ಪ್ರಶಸ್ತಿ  ಪುರಸ್ಕೃತ, ತುಳು ವಾಲ್ಮೀಕಿ, ಮಹಾಕವಿ  ಮಂದಾರ ಕೇಶವ ಭಟ್ಟರ ಸಹೋದರರಾದ ಮಂದಾರ ರಾಧಾ-ಮಾಧವ ಭಟ್ಟರ ಪುತ್ರ. ಸಾಹಿತ್ಯ ಕ್ಷೇತ್ರದಲ್ಲಿ ಅನುಪಮ ಸೇವೆ ಮಾಡಿದ ಮಂದಾರ ಕೇಶವ ಭಟ್ಟರು ಕರಾವಳಿ ಮಾತ್ರವಲ್ಲದೆ ನಾಡಿನುದ್ದಗಲಕ್ಕೂ ಬಹು ದೊಡ್ಡ ಹೆಸರು.

ಮೂಲತಃ ಕೃಷಿ ಕುಟುಂಬದಲ್ಲಿ ಜನಿಸಿದ ರಾಜೇಶ ಭಟ್ಟರು ಸಹಜವಾಗಿ ಕೃಷಿ ಹಾಗೂ ತೋಟಗಾರಿಕೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಈಗಾಗಲೇ ಹಲವಾರು ಸರಕಾರಿ, ಅರೆ ಸರ್ಕಾರಿ ಮತ್ತು ಸ್ವಯಂಸೇವಾ ಸಂಸ್ಥೆಗಳಿಂದ ಗೌರವ ಸನ್ಮಾನ ಪಡೆದಿದ್ದಾರೆ. ಇವರೊಳಗಿನ ಸಾಮಾಜಿಕ ಕಳಕಳಿ ಇವರನ್ನು ಸಮಾಜ ಸೇವೆಗೆ ಪ್ರೇರೇಪಿಸಿದೆ. ಪತ್ರಕರ್ತನಾಗಿ ಸಾಮಾಜಿಕ ತುಡಿತದ ಜತೆಗೆ ಸಮಾಜ ಸೇವೆಯ ಮಿಡಿತ ಇವರಲ್ಲಿ ಸಮ್ಮಿಳಿತವಾಗಿದೆ.

ಕೃಷಿ, ಹೂದೋಟ ನಿರ್ಮಾಣ, ಉದ್ಯಾನವನ, ವನಮಹೋತ್ಸವ ಆಚರಣೆ  ಮೂಲಕ ಪರಿಸರ ಸಂರಕ್ಷಣೆ, ರಾಷ್ಟ್ರೀಯ ಭಾವೈಕ್ಯತೆ ಮತ್ತು ಸಾಂಸ್ಕೃತಿಕ ಅಧ್ಯಯನಕ್ಕಾಗಿ ಭಾರತ ದರ್ಶನ, ದೃಶ್ಯ ಮಾಧ್ಯಮ ನಿರೂಪಕನಾಗಿ  ಹಾಗೂ ಪತ್ರಿಕಾ ವರದಿಗಾರರಾಗಿ ರಾಜೇಶ್ ಭಟ್ಟರು ಕಾರ್ಯನಿರ್ವಹಿಸುತ್ತಿದ್ದಾರೆ.

ಬಡವರ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ಸಹಾಯ, ಬಡ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ಸಹಾಯ, ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ, ಸಾಧಕರ ಕುರಿತು ಪುಸ್ತಕ ಪ್ರಕಟಣೆ, ಉಚಿತ ಹಂಚಿಕೆ ಮಾಡುತ್ತಿದ್ದಾರೆ. ಪ್ರಸ್ತುತ ಕೃಷಿಕನಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪತ್ರಿಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಜುಲೈ 16,  2022ರಂದು ತಮಿಳುನಾಡಿನ ಹೊಸೂರಿನಲ್ಲಿ ನಡೆದ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುನಿವರ್ಸಲ್ ಡೆವಲಪ್ಮೆಂಟ್ ಕೌನ್ಸಿಲ್ ಇದರ ಸ್ಥಾಪಕಾಧ್ಯಕ್ಷ ಡಾ. ಸಿ. ಪೌಲ್ ಇಬನೇಜರ್, ಯುನಿವರ್ಸಲ್ ಡೆವಲಪ್ಮೆಂಟ್ ಕೌನ್ಸಿಲ್ 

ಉಪಾಧ್ಯಕ್ಷ ಡಾ. ಕೆ.ಪ್ರಭಾಕರ್  ಗೌರವ ಅತಿಥಿಗಳಾಗಿ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾ ನಿವೃತ್ತ  ನ್ಯಾಯಾಧೀಶ ಡಾ. ಜೆ. ಹರಿದಾಸ್ MBA,BL, Ph. D(law ), ಸಿ. ತಮಿಳ್ ಸೆಲ್ವಂ B. com., CAIIB,DCA, NCFM. ಡಾ. .ಜಿ. ರವಿ ಚಂದ್ರಿಕಾ Bsc, MA, ಡಾ. ಇಂದ್ರಾಣಿ ರಾಧಾಕೃಷ್ಣನ್ SPMUDA,  ಶ್ರೀ ರಾಮಲಿಂಗಯ್ಯ ಸ್ವಾಮೀಜಿ, ಷಣ್ಮುಖ ಗಾಂಧಿ , ಡಾ. ಎ.ಎಮ್. ಆಲಿ SNR, ಡಾ.
ಗುಣವಂತ ಮಂಜು ಅವರ ಸಮಕ್ಷಮದಲ್ಲಿ ಈ ಪ್ರಶಸ್ತಿಯನ್ನು ಮಂದಾರ ರಾಜೇಶ್ ಭಟ್ಟರು ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವರಿಗೆ ನೀಡಲಾಯಿತು. 

ಇತ್ತೀಚಿನ ಸುದ್ದಿ

ಜಾಹೀರಾತು