1:14 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕಂಚು ಗೆದ್ದ ಭಾರತ : ಹಾಕಿಯಲ್ಲಿ 41 ವರ್ಷದ ಒಲಿಂಪಿಕ್ ಪದಕದ ಬರ ನೀಗಿಸಿದ ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡ

05/08/2021, 09:38

reporterKarnataka.com

ಒಲಿಂಪಿಕ್ಸ್‌ ಹಾಕಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಪುರುಷರ ತಂಡ ಪದಕವನ್ನು ಪಡೆದುಕೊಂಡು ಹೊಸ ಇತಿಹಾಸ ರಚಿಸಿದೆ. ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ರೋಚಕತೆಯಿಂದ ಕೂಡಿದ ಕಂಚಿನ ಪದಕದ ಕಾದಾಟದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಮಣಿಸುವ ಮೂಲಕ ಭಾರತ ಹಾಕಿ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ.

ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಟೈಮೂರ್ ಗೋಲು ಬಾರಿಸುವ ಮೂಲಕ ಜರ್ಮನಿಗೆ 1-0 ಮುನ್ನಡೆ ಒದಗಿಸಿಕೊಟ್ಟರು. ಇದರೊಂದಿಗೆ ಮೊದಲ ಕ್ವಾರ್ಟರ್‌ನಲ್ಲಿ ಜರ್ಮನಿ 1-0 ಮುನ್ನಡೆ ಕಾಯ್ದುಕೊಂಡಿತು. ಇನ್ನು ಎರಡನೇ ಕ್ವಾರ್ಟರ್‌ನಲ್ಲಿ ಕಮ್‌ಬ್ಯಾಕ್‌ ಮಾಡುವಲ್ಲಿ ಭಾರತ ಯಶಸ್ವಿಯಾಯಿತು. ಎರಡನೇ ಕ್ವಾರ್ಟರ್‌ನಲ್ಲಿ ಭಾರತ ಮೂರು ಗೋಲು ಬಾರಿಸಿದರೆ, ಜರ್ಮನಿ ಎರಡು ಗೋಲು ಬಾರಿಸಿತು. ಇದರೊಂದಿಗೆ ಮೊದಲಾರ್ಧ ಮುಕ್ತಾಯದ ವೇಳೆಗೆ 3-3ರ ಸಮಬಲ ಸಾಧಿಸಿತು.

ಇನ್ನು ಮೂರನೇ ಕ್ವಾರ್ಟರ್‌ನಲ್ಲಿ ಮತ್ತಷ್ಟು ಆಕ್ರಮಣಕಾರಿ ಪ್ರದರ್ಶನ ತೋರಿದ ಮನ್‌ಪ್ರೀತ್‌ ಪಡೆ ಮತ್ತೆರಡು ಗೋಲು ಬಾರಿಸುವ ಮೂಲಕ ಭಾರತಕ್ಕೆ 5-3ರ ಮುನ್ನಡೆ ಒದಗಿಸಿಕೊಟ್ಟಿತು. ಇನ್ನು ಕೊನೆಯ ಕ್ವಾರ್ಟರ್‌ನಲ್ಲಿ ಜರ್ಮನಿ ಕೇವಲ ಒಂದು ಗೋಲು ಗಳಿಸಲಷ್ಟೇ ಶಕ್ತವಾಯಿತು.

ಭಾರತ ಹಾಕಿ ತಂಡವು 1980ರ ಬಳಿಕ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಜರ್ಮನಿಗೆ ಬರೋಬ್ಬರಿ 13 ಪೆನಾಲ್ಟಿ ಕಾರ್ನರ್‌ ಗಳಿಸುವ ಅವಕಾಶವಿದ್ದರೂ ಕೇವಲ ಒಂದು ಗೋಲು ಗಳಿಸಲಷ್ಟೇ ಜರ್ಮನಿ ಶಕ್ತವಾಯಿತು. ಗೋಲ್ ಕೀಪರ್ ಶ್ರೀಜೆಶ್ ಕೂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು